ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP)ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಚಟುವಟಿಕೆಗಳು ವೇಗ ಪಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿ ಎಲ್ ಪಿ) ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು. ಬಳಿಕ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ  ಅವರ ಮೇಲ್ವಿಚಾರಣೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರು ಶನಿವಾರ ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.

ಇದರೊಂದಿಗೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವ ಹಾದಿ ಸುಗಮವಾಗಿದೆ.

ಇನ್ನೊಂದೆಡೆ ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ದಿನಾಂಕ ನಿಗದಿಯಾಗಿದೆ. ಜೂನ್‌ 3ರ ಬುಧವಾರ ಸಂಜೆ 4.05 ಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ, ಮತ್ತೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

16 hours ago

ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯ ಭೀಕರ ಕೊಲೆ

ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…

18 hours ago

ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿ ಗಾಂಜಾ ಮಾರಾಟ: ಇಬ್ಬರ ಬಂಧನ, 3.61 ಕೆಜಿ ಗಾಂಜಾ ವಶ

ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3…

19 hours ago

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್…

19 hours ago

ಗಂಧದ ಮರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ: ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆಜಿ ತೂಕದ ಗಂಧದ ತುಂಡುಗಳ ವಶ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಗಂಧದ ಮರ ಕಳ್ಳತನ ಪ್ರಕರಣವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

21 hours ago

ಅಂತಾರಾಜ್ಯ ಮನೆಗಳ್ಳರ ಬಂಧನ: ₹11.42 ಲಕ್ಷ ಮೌಲ್ಯದ ಕಳವು ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ…

1 day ago