ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿರುವ ಹಗರಣಗಳ ತನಿಖೆಗೆ ಒತ್ತಾಯಿಸಿದ ಶ್ರೀರಾಮಸೇನೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇತ್ತೀಚೆಗೆ ಸಾಕಷ್ಟು ಅವ್ಯವಹಾರ ಹಗರಣಗಳು ಬೆಳಕಿಗೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಅಂಬೇಡ್ಕರ್ ನಿಗಮದ ಅನುದಾನ ದುರ್ಬಳಕೆ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಾದ ದೇವರಾಜ್ ಅರಸು ನಿಗಮದ ಹಗರಣಗಳ ಬಗ್ಗೆ ದಿನಪತ್ರಿಕೆಗಳು ಮತ್ತು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯ ಶ್ರೀರಾಮ ಸೇನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಸ್.ರಮೇಶ್ ಗೌಡ ಹೇಳಿದರು.

ಇತ್ತೀಚೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ನಿಷ್ಪಕ್ಷಪಾತವಾಗಿ ಶಿಕ್ಷಿಸಿ ರಾಜ್ಯದ ಬೊಕ್ಕಸಕ್ಕೆ ದುರ್ಬಳಕೆ ಮಾಡಿಕೊಂಡಿರುವ ತೆರಿಗೆದಾರರ ಹಣವನ್ನು ಮರಳಿಸುವಂತೆ ಕೋರಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಗುಡುಗಿದರು.

ನಂತರ ರಾಘವೇಂದ್ರ ಗುರುಪೀಠದ ಶ್ರೀನಿವಾಸ್ ಗೂರೂಜಿ ಮಾತನಾಡಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ನಿಗಮಗಳಿಗೆ ಮೀಸಲಿಟ್ಟ ಕೋಟ್ಯಂತರ ರೂಪಾಯಿ ದುರುಪಯೋಗವಾಗಿದೆ. ಈ ಎಲ್ಲಾ ಹಗರಣಗಳ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು ಮತ್ತು ದುರುಪಯೋಗಪಡಿಸಿಕೊಂಡ ಸಾರ್ವಜನಿಕ ತೆರಿಗೆ ಹಣವನ್ನು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹಿಂತಿರುಗಿಸಬೇಕೆಂದು ಎಂದು ಆಗ್ರಹಿಸಿದರು.

ಈ ವೇಳೆ ಶ್ರೀರಾಮಸೇನೆಯ ಜಿಲ್ಲಾ ಪ್ರಧಾನ‌‌ ಕಾರ್ಯದರ್ಶಿ ಆನಂದ್ ಆರ್, ಚಂದ್ರಕಲಾ‌, ಪದ್ಮಾವತಿ, ಜಯರಾಮಯ್ಯ ಸೇರಿದಂತೆ ಶ್ರೀರಾಮಸೇನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago