ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸ ಮಾಡಲಾಗುವುದು- ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ

ಇದೇ ಮೊದಲ ಬಾರಿಗೆ ಆನ್ನೈನ್ ಮೂಲಕ ನಡೆಸಲಾದ ಯುವ ಕಾಂಗ್ರೆಸ್ ಸಮಿತಿ ಚುನಾವಣಾ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ.

ಇದರಂತೆ ಯುವ ಕಾಂಗ್ರೆಸ್‌ ಸಮಿತಿ ರಾಜ್ಯಾಧ್ಯಕ್ಷರಾಗಿ ಎಚ್.ಎಸ್.ಮಂಜುನಾಥ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌, ಪ್ರಧಾನ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಎನ್, ದೊಡ್ಡಬಳ್ಳಾಪುರ ಗ್ರಾಮಾಂತರ ಅಧ್ಯಕ್ಷರಾಗಿ ರಾಕೇಶ್ ಗೌಡ ಮತ್ತು ತಾಲೂಕು ಉಪಾಧ್ಯಕ್ಷರಾಗಿ ಶ್ರವಣೂರು ರಾಜೇಶ್ ಎನ್, ಜಿಲ್ಲಾ ಉಪಾಧ್ಯಕ್ಷರಾಗಿ ಬೆಳ್ಳಿ ನಾಗೇಶ್.ಎಂ, ತಾಲೂಕು ಉಪಾಧ್ಯಕ್ಷ ಮುನಿರಾಜು, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ, ನಗರ ಉಪಾಧ್ಯಕ್ಷ ಹರ್ಷಿತ್ ಅವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಹಾಗೂ ಕೆ.ಎಚ್ ಮುನಿಯಪ್ಪ, ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನ ಪ್ರಾಧಿಕಾರದ ಸದಸ್ಯ ಹಾಗೂ ವಕೀಲ ಆರ್.ವಿ.ಮಹೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ನ ಹಲವಾರು ನಾಯಕರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ.

ಅಭಿನಂದನೆ ಸ್ವೀಕರಿಸಿ‌ ಪಬ್ಲಿಕ್ ಮಿರ್ಚಿಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌ ಮಾತನಾಡಿ, ನೂತನ ಪದಾಧಿಕಾರಿಗಳು ನಮ್ಮ ಮೇಲೆ ಭರವಸೆ ಇಟ್ಟು ನಮಗೆ ಅಧಿಕ ಮತಗಳನ್ನು ನೀಡಿ ಪಕ್ಷದ ಕೆಲಸ ಮಾಡಲು ಬೆಂಬಲಿಸಿದ ಎಲ್ಲಾ ಯುವ ಕಾಂಗ್ರೆಸ್ ಸದಸ್ಯರಿಗೆ ಹಾಗೂ ಬೆಂಬಲಿಸಿದ ಮುಖಂಡರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ‌. ನಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಬಳಸಿಕೊಂಡು ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಕಟ್ಟಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ತರುವಂತೆ ಮಾಡುವುದೇ ನಮ್ಮ ಉದ್ದೇಶ ಎಂದರು.

ನಂತರ ಪಬ್ಲಿಕ್ ಮಿರ್ಚಿಯೊಂದಿಗೆ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ, ಜವಾಬ್ದಾರಿ ನೀಡಿದೆ‌. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿನ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸವನ್ನ ಮಾಡಲಾಗುವುದು, ಪಕ್ಷದಲ್ಲಿನ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಪಕ್ಷ ಬಲವರ್ಧನೆಗಾಗಿ ದುಡಿಯುವುದಾಗಿ ಹೇಳಿದರು.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

3 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

4 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

23 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

1 day ago