ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸ ಮಾಡಲಾಗುವುದು- ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ

ಇದೇ ಮೊದಲ ಬಾರಿಗೆ ಆನ್ನೈನ್ ಮೂಲಕ ನಡೆಸಲಾದ ಯುವ ಕಾಂಗ್ರೆಸ್ ಸಮಿತಿ ಚುನಾವಣಾ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ.

ಇದರಂತೆ ಯುವ ಕಾಂಗ್ರೆಸ್‌ ಸಮಿತಿ ರಾಜ್ಯಾಧ್ಯಕ್ಷರಾಗಿ ಎಚ್.ಎಸ್.ಮಂಜುನಾಥ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌, ಪ್ರಧಾನ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಎನ್, ದೊಡ್ಡಬಳ್ಳಾಪುರ ಗ್ರಾಮಾಂತರ ಅಧ್ಯಕ್ಷರಾಗಿ ರಾಕೇಶ್ ಗೌಡ ಮತ್ತು ತಾಲೂಕು ಉಪಾಧ್ಯಕ್ಷರಾಗಿ ಶ್ರವಣೂರು ರಾಜೇಶ್ ಎನ್, ಜಿಲ್ಲಾ ಉಪಾಧ್ಯಕ್ಷರಾಗಿ ಬೆಳ್ಳಿ ನಾಗೇಶ್.ಎಂ, ತಾಲೂಕು ಉಪಾಧ್ಯಕ್ಷ ಮುನಿರಾಜು, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ, ನಗರ ಉಪಾಧ್ಯಕ್ಷ ಹರ್ಷಿತ್ ಅವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಹಾಗೂ ಕೆ.ಎಚ್ ಮುನಿಯಪ್ಪ, ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನ ಪ್ರಾಧಿಕಾರದ ಸದಸ್ಯ ಹಾಗೂ ವಕೀಲ ಆರ್.ವಿ.ಮಹೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ನ ಹಲವಾರು ನಾಯಕರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ.

ಅಭಿನಂದನೆ ಸ್ವೀಕರಿಸಿ‌ ಪಬ್ಲಿಕ್ ಮಿರ್ಚಿಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌ ಮಾತನಾಡಿ, ನೂತನ ಪದಾಧಿಕಾರಿಗಳು ನಮ್ಮ ಮೇಲೆ ಭರವಸೆ ಇಟ್ಟು ನಮಗೆ ಅಧಿಕ ಮತಗಳನ್ನು ನೀಡಿ ಪಕ್ಷದ ಕೆಲಸ ಮಾಡಲು ಬೆಂಬಲಿಸಿದ ಎಲ್ಲಾ ಯುವ ಕಾಂಗ್ರೆಸ್ ಸದಸ್ಯರಿಗೆ ಹಾಗೂ ಬೆಂಬಲಿಸಿದ ಮುಖಂಡರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ‌. ನಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಬಳಸಿಕೊಂಡು ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಕಟ್ಟಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ತರುವಂತೆ ಮಾಡುವುದೇ ನಮ್ಮ ಉದ್ದೇಶ ಎಂದರು.

ನಂತರ ಪಬ್ಲಿಕ್ ಮಿರ್ಚಿಯೊಂದಿಗೆ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ, ಜವಾಬ್ದಾರಿ ನೀಡಿದೆ‌. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿನ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸವನ್ನ ಮಾಡಲಾಗುವುದು, ಪಕ್ಷದಲ್ಲಿನ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಪಕ್ಷ ಬಲವರ್ಧನೆಗಾಗಿ ದುಡಿಯುವುದಾಗಿ ಹೇಳಿದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

4 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

5 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

6 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

7 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

9 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

14 hours ago