ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸ ಮಾಡಲಾಗುವುದು- ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ

ಇದೇ ಮೊದಲ ಬಾರಿಗೆ ಆನ್ನೈನ್ ಮೂಲಕ ನಡೆಸಲಾದ ಯುವ ಕಾಂಗ್ರೆಸ್ ಸಮಿತಿ ಚುನಾವಣಾ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ.

ಇದರಂತೆ ಯುವ ಕಾಂಗ್ರೆಸ್‌ ಸಮಿತಿ ರಾಜ್ಯಾಧ್ಯಕ್ಷರಾಗಿ ಎಚ್.ಎಸ್.ಮಂಜುನಾಥ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌, ಪ್ರಧಾನ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಎನ್, ದೊಡ್ಡಬಳ್ಳಾಪುರ ಗ್ರಾಮಾಂತರ ಅಧ್ಯಕ್ಷರಾಗಿ ರಾಕೇಶ್ ಗೌಡ ಮತ್ತು ತಾಲೂಕು ಉಪಾಧ್ಯಕ್ಷರಾಗಿ ಶ್ರವಣೂರು ರಾಜೇಶ್ ಎನ್, ಜಿಲ್ಲಾ ಉಪಾಧ್ಯಕ್ಷರಾಗಿ ಬೆಳ್ಳಿ ನಾಗೇಶ್.ಎಂ, ತಾಲೂಕು ಉಪಾಧ್ಯಕ್ಷ ಮುನಿರಾಜು, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ, ನಗರ ಉಪಾಧ್ಯಕ್ಷ ಹರ್ಷಿತ್ ಅವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಹಾಗೂ ಕೆ.ಎಚ್ ಮುನಿಯಪ್ಪ, ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನ ಪ್ರಾಧಿಕಾರದ ಸದಸ್ಯ ಹಾಗೂ ವಕೀಲ ಆರ್.ವಿ.ಮಹೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ನ ಹಲವಾರು ನಾಯಕರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ.

ಅಭಿನಂದನೆ ಸ್ವೀಕರಿಸಿ‌ ಪಬ್ಲಿಕ್ ಮಿರ್ಚಿಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌ ಮಾತನಾಡಿ, ನೂತನ ಪದಾಧಿಕಾರಿಗಳು ನಮ್ಮ ಮೇಲೆ ಭರವಸೆ ಇಟ್ಟು ನಮಗೆ ಅಧಿಕ ಮತಗಳನ್ನು ನೀಡಿ ಪಕ್ಷದ ಕೆಲಸ ಮಾಡಲು ಬೆಂಬಲಿಸಿದ ಎಲ್ಲಾ ಯುವ ಕಾಂಗ್ರೆಸ್ ಸದಸ್ಯರಿಗೆ ಹಾಗೂ ಬೆಂಬಲಿಸಿದ ಮುಖಂಡರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ‌. ನಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಬಳಸಿಕೊಂಡು ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಕಟ್ಟಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ತರುವಂತೆ ಮಾಡುವುದೇ ನಮ್ಮ ಉದ್ದೇಶ ಎಂದರು.

ನಂತರ ಪಬ್ಲಿಕ್ ಮಿರ್ಚಿಯೊಂದಿಗೆ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ, ಜವಾಬ್ದಾರಿ ನೀಡಿದೆ‌. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿನ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸವನ್ನ ಮಾಡಲಾಗುವುದು, ಪಕ್ಷದಲ್ಲಿನ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಪಕ್ಷ ಬಲವರ್ಧನೆಗಾಗಿ ದುಡಿಯುವುದಾಗಿ ಹೇಳಿದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

9 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

21 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

21 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago