ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಮುಂದುವರಿಸಿದರೆ ಪರಿಣಾಮ ನೆಟ್ಟಗೆ ಇರೋದಿಲ್ಲ- ಶಾಸಕ ಧೀರಜ್ ಮುನಿರಾಜ್ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಗರಣಗಳು ಹೆಚ್ಚಾಗಿವೆ. ಎಸ್.ಸಿ.ಎಸ್.ಟಿ ಅನುದಾನವನ್ನು ಗ್ಯಾರಂಟಿ ಭಾಗ್ಯಗಳಿಗೆ ಬಳಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮುಂತ್ರಿಗಳ ಪಾತ್ರವಿದೆ. ರಾಜ್ಯ ಸರ್ಕಾರ ರೈತ ಹಾಗೂ ಜನವಿರೋಧಿಯಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಆರೋಪಿಸಿದರು.

ದೊಡ್ಡಬಳ್ಳಾಪುರ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಒಂದು ಸಮುದಾಯವನ್ನು ಸಂತೃಪ್ತಿಪಡಿಸುವ ಬರದಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕರಾವಳಿಯಲ್ಲಿ ಹಿಂದೂಪರ ಹೋರಾಟಗಾರರನ್ನು ಗಡಿಪಾರು ಮಾಡುವ ಹಾಗೂ ಇಲ್ಲಸಲ್ಲದ ದೂರುಗಳನ್ನು ದಾಖಲಿಸುವ ಕ್ರಮ ಖಂಡನೀಯ. ರಾಜ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಮುಂದುವರಿಸಿದರೆ ಬಿಜೆಪಿ ಯುವ ಘಟಕದಿಂದ ಜೈಲ್ ಬರೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ ದುರಾಡಳಿತ ತಾಂಡವಾಡುತ್ತಿದೆ…ಸರ್ಕಾರದ ತಿಜೋರಿಯಿಂದ  187ಕೋಟಿ ಲೂಟಿ ಮಾಡಿದ ತಪ್ಪಿತಸ್ಥರಿಗೆ ಯಾವ ಶಿಕ್ಷೆ ವಿಧಿಸಿದ್ದೀರಿ…? ಇದರಲ್ಲಿ ಭಾಗಿಯಾಗಿದ್ದ ಎಷ್ಟು ಜನ‌ ಅಧಿಕಾರಿಗಳನ್ನು ವಜಾ ಮಾಡಿದ್ದೀರಿ…? ಕಾಂಗ್ರೆಸ್ ಸರ್ಕಾರ ಲಜ್ಜೆ ಗೆಟ್ಟ ಸರ್ಕಾರ ಎಂದು ಗುಡುಗಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನ ಸಾಮಾನ್ಯರಿಗೆ, ಬಡವರಿಗೆ, ದಲಿತರಿಗೆ, ಮಹಿಳೆಯರಿಗೆ ರಕ್ಷಣೆ‌ ಇಲ್ಲದಂತೆ ಆಗಿದೆ… ಕೊಳ್ಳೆ ಹೊಡೆಯುವವರಿಗೆ ರಕ್ಷಣೆ, ಬಡವರ ಹೊಟ್ಟೆ ಮೇಲೆ ಬರೆ ಎಳೆಯುವುದೇ ಸರ್ಕಾರದ ಧೋರಣೆಯಾಗಿದೆ… ಇದೂವರೆಗೆ ಸಾಮಾನ್ಯ ಜನರು, ಬಡವರ, ರೈತರ, ವಿದ್ಯಾರ್ಥಿಗಳ ಪರ ಯಾವ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಒಂದು ಕೊಟ್ಟು ಮತ್ತೊಂದನ್ನು ಕಸಿದುಕೊಳ್ಳುತ್ತಿದೆ ಎಂದು‌ ಕಿಡಿಕಾರಿದರು…

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹಾವಳಿ ಮಿತಿಮೀರುತ್ತಿದೆ… ಒಂದು ಎಕರೆ ಗ್ರಾಂಟ್ ಮಾಡಿಸಿಕೊಳ್ಳಬೇಕಾದರೆ ಲಕ್ಷಗಳು ಕೊಡಬೇಕು. ಸಾಮಾನ್ಯ ರೈತ ಎಲ್ಲಿಂದ ಅಷ್ಟು ಹಣ ತರುತ್ತಾನೆ. ಕಂದಾಯ ಇಲಾಖೆ ದುಬಾರಿಯಾಗಿದೆ…. ರಾಜ್ಯದಲ್ಲಿ ಹಿಟ್ಲರ್ ಆಡಳಿತ‌ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…

ಇದೂವರೆಗೆ ಮೂಲಭೂತ ಸೌಕರ್ಯಗಳಿಗಾಗಿ ನಮಗೆ ಸ್ಪೆಷಲ್ ಗ್ರಾಂಟ್ ಕೊಟ್ಟಿಲ್ಲ. ಒಂದು ಲಕ್ಷ ಕೋಟಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಇಟ್ಟಿದ್ದಾರೆ ಎಂದು ಹೇಳುತ್ತಾರೆ. ನಮಗೆ ಯಾವ ಅನುದಾನವೂ ಬಂದಿಲ್ಲ. ಬಡವರು, ಮಹಿಳೆಯರು, ಯುವಕರು ಏನಾದರು ಕೇಳಿದ್ರಾ ಗ್ಯಾರಂಟಿ ಯೋಜನೆಗಳನ್ನು ತನ್ನಿ ಅಂತಾ… ಇದು ಎಲೆಕ್ಷನ್ ಗಿಮಿಕ್ ಅಷ್ಟೆ ಎಂದು ಹೇಳಿದರು.

Ramesh Babu

Journalist

Recent Posts

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

46 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

3 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

3 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

10 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

20 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

21 hours ago