ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಗರಣಗಳು ಹೆಚ್ಚಾಗಿವೆ. ಎಸ್.ಸಿ.ಎಸ್.ಟಿ ಅನುದಾನವನ್ನು ಗ್ಯಾರಂಟಿ ಭಾಗ್ಯಗಳಿಗೆ ಬಳಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮುಂತ್ರಿಗಳ ಪಾತ್ರವಿದೆ. ರಾಜ್ಯ ಸರ್ಕಾರ ರೈತ ಹಾಗೂ ಜನವಿರೋಧಿಯಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಆರೋಪಿಸಿದರು.
ದೊಡ್ಡಬಳ್ಳಾಪುರ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಒಂದು ಸಮುದಾಯವನ್ನು ಸಂತೃಪ್ತಿಪಡಿಸುವ ಬರದಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕರಾವಳಿಯಲ್ಲಿ ಹಿಂದೂಪರ ಹೋರಾಟಗಾರರನ್ನು ಗಡಿಪಾರು ಮಾಡುವ ಹಾಗೂ ಇಲ್ಲಸಲ್ಲದ ದೂರುಗಳನ್ನು ದಾಖಲಿಸುವ ಕ್ರಮ ಖಂಡನೀಯ. ರಾಜ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಮುಂದುವರಿಸಿದರೆ ಬಿಜೆಪಿ ಯುವ ಘಟಕದಿಂದ ಜೈಲ್ ಬರೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ದುರಾಡಳಿತ ತಾಂಡವಾಡುತ್ತಿದೆ…ಸರ್ಕಾರದ ತಿಜೋರಿಯಿಂದ 187ಕೋಟಿ ಲೂಟಿ ಮಾಡಿದ ತಪ್ಪಿತಸ್ಥರಿಗೆ ಯಾವ ಶಿಕ್ಷೆ ವಿಧಿಸಿದ್ದೀರಿ…? ಇದರಲ್ಲಿ ಭಾಗಿಯಾಗಿದ್ದ ಎಷ್ಟು ಜನ ಅಧಿಕಾರಿಗಳನ್ನು ವಜಾ ಮಾಡಿದ್ದೀರಿ…? ಕಾಂಗ್ರೆಸ್ ಸರ್ಕಾರ ಲಜ್ಜೆ ಗೆಟ್ಟ ಸರ್ಕಾರ ಎಂದು ಗುಡುಗಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನ ಸಾಮಾನ್ಯರಿಗೆ, ಬಡವರಿಗೆ, ದಲಿತರಿಗೆ, ಮಹಿಳೆಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ… ಕೊಳ್ಳೆ ಹೊಡೆಯುವವರಿಗೆ ರಕ್ಷಣೆ, ಬಡವರ ಹೊಟ್ಟೆ ಮೇಲೆ ಬರೆ ಎಳೆಯುವುದೇ ಸರ್ಕಾರದ ಧೋರಣೆಯಾಗಿದೆ… ಇದೂವರೆಗೆ ಸಾಮಾನ್ಯ ಜನರು, ಬಡವರ, ರೈತರ, ವಿದ್ಯಾರ್ಥಿಗಳ ಪರ ಯಾವ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಒಂದು ಕೊಟ್ಟು ಮತ್ತೊಂದನ್ನು ಕಸಿದುಕೊಳ್ಳುತ್ತಿದೆ ಎಂದು ಕಿಡಿಕಾರಿದರು…
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹಾವಳಿ ಮಿತಿಮೀರುತ್ತಿದೆ… ಒಂದು ಎಕರೆ ಗ್ರಾಂಟ್ ಮಾಡಿಸಿಕೊಳ್ಳಬೇಕಾದರೆ ಲಕ್ಷಗಳು ಕೊಡಬೇಕು. ಸಾಮಾನ್ಯ ರೈತ ಎಲ್ಲಿಂದ ಅಷ್ಟು ಹಣ ತರುತ್ತಾನೆ. ಕಂದಾಯ ಇಲಾಖೆ ದುಬಾರಿಯಾಗಿದೆ…. ರಾಜ್ಯದಲ್ಲಿ ಹಿಟ್ಲರ್ ಆಡಳಿತ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…
ಇದೂವರೆಗೆ ಮೂಲಭೂತ ಸೌಕರ್ಯಗಳಿಗಾಗಿ ನಮಗೆ ಸ್ಪೆಷಲ್ ಗ್ರಾಂಟ್ ಕೊಟ್ಟಿಲ್ಲ. ಒಂದು ಲಕ್ಷ ಕೋಟಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಇಟ್ಟಿದ್ದಾರೆ ಎಂದು ಹೇಳುತ್ತಾರೆ. ನಮಗೆ ಯಾವ ಅನುದಾನವೂ ಬಂದಿಲ್ಲ. ಬಡವರು, ಮಹಿಳೆಯರು, ಯುವಕರು ಏನಾದರು ಕೇಳಿದ್ರಾ ಗ್ಯಾರಂಟಿ ಯೋಜನೆಗಳನ್ನು ತನ್ನಿ ಅಂತಾ… ಇದು ಎಲೆಕ್ಷನ್ ಗಿಮಿಕ್ ಅಷ್ಟೆ ಎಂದು ಹೇಳಿದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…