ಕಾಂಗ್ರೆಸ್ ಸ್ವಾಭಿಮಾನಿ‌ ಬಣ ಬಿಜೆಪಿಯೊಂದಿಗೆ ವಿಲೀನ; ಟಿಕೆಟ್ ಭರವಸೆ..?; ಬಿಜೆಪಿ ಸೇರ್ಪಡೆಯಾದ ಬಿ.ಸಿ.ಆನಂದ್

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ತಿ.ರಂಗರಾಜು, ಎಂ.ಜಿ.ಶ್ರೀನಿವಾಸ್ ಕನಸವಾಡಿಯ ಪ್ರಕಾಶ್, ಬಿ ಎಚ್ ಕೆಂಪಣ್ಣ, ದಲಿತ ಮುಖಂಡ ಮರಿಯಪ್ಪ ಮತ್ತು ಕಿಸಾನ್ ಕಾಂಗ್ರೆಸ್ ಮುಖಂಡರಾಗಿದ್ದ ಕುಮುದ ಜಗದೀಶ್ ಹಾಗೂ ತಮ್ಮ ಬೆಂಬಲಿಗರೊಂದಿಗೆ ಗುರುವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಡಾ.ಸುಧಾಕರ್ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಿದರು.

ಹಾಲಿ ಶಾಸಕ ಟಿ.ವೆಂಕಟರಮಣಯ್ಯ ಅವರ ವಿರುದ್ಧ ತಿರುಗಿಬಿದ್ದು, ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದು, ಕಾಂಗ್ರೆಸ್ ಸ್ವಾಭಿಮಾನಿ‌ ಬಣ ಕಟ್ಟಿಕೊಂಡಿದ್ದ‌ ನಾಯಕರು ಇದೀಗ ಕಮಲ ಪಾಳಯ ಸೇರಿದ್ದಾರೆ.

ಶಾಸಕ ಟಿ.ವೆಂಕಟರಮಣಯ್ಯ ಅವರ ಆಡಳಿತ ವಿರೋಧಿ ಅಲೆಗೆ ಬೇಸತ್ತು ಬಿ.ಸಿ.ಆನಂದಕುಮಾರ್ ಅವರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ‌ ಸಲ್ಲಿಸಿದ್ದರು. ಅರ್ಜಿ ಪರಿಗಣಿಸುವಂತೆ ಆಗ್ರಹಿಸಿ ಸ್ವಾಭಿಮಾನಿ‌ ಕಾಂಗ್ರೆಸ್‌ ಬಣದ‌‌ ಮುಖಂಡರು ನೂರಾರು ಕಾರ್ಯಕರ್ತರೊಂದಿಗೆ ಬಹಿರಂಗ ಪತ್ರಿಕಾಗೋಷ್ಠಿ‌ ನಡೆಸಿ, ಹೈಕಮಾಂಡ್ ಗೆ ಗಡುವು‌ ನೀಡಿದ್ದರು.

ಈ ಮಧ್ಯೆ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರು ಬಿ.ಸಿ.ಆನಂದ್ ಅವರನ್ನು ಮನವೊಲಿಸಿ, ಹಾಲಿ ಶಾಸಕರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರು. ಕಾಂಗ್ರೆಸ್ ನಾಯಕರ ಈ ಧೋರಣೆಗೆ ಸ್ವಾಭಿಮಾನಿ‌ಬಣದ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಮದ್ಯೆ ಬಿ.ಸಿ.ಆನಂದ್, ತಿ.ರಂಗರಾಜು ಅವರು ಸ್ಥಳೀಯ ಬಿಜೆಪಿ‌ ನಾಯಕರು ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳೊಟ್ಟಿಗೆ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿ‌ ಮಾಡಿ, ಕುತೂಹಲ ಮೂಡಿಸಿದ್ದರು.

ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಟಿಕೆಟ್ ಖಚಿತವಾಗುತ್ತಿದ್ದಂತೆ ಕೆಪಿಸಿಸಿ‌ ಸದಸ್ಯ ಹಾಲಿ ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದಕ್ಕೆ ತಿ.ರಂಗರಾಜು ಹಾಗೂ ಬಿ.ಸಿ.ಆನಂದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.‌

ಏ.8 ರಂದು ಬಿಜೆಪಿ‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ದಿನಾಂಕ‌ ನಿಗದಿಯಾದ ಬೆನ್ನಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸ್ವಾಭಿಮಾನಿ‌ ಕಾಂಗ್ರೆಸ್ ಬಣದ ಮುಖಂಡರು ಕಮಲ ಮುಡಿದಿದ್ದು, ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

47 minutes ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

3 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

4 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

12 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

15 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

23 hours ago