ಪ್ರಧಾನಿ ಮೋದಿ ಪ್ರಕಾರ ಕಾಂಗ್ರೆಸ್ 85% ಸರ್ಕಾರ, ಕಾಂಗ್ರೆಸ್ ಹೇಳುತ್ತೆ ಬಿಜೆಪಿ 40% ಸರ್ಕಾರ ಎನ್ನುತ್ತಾರೆ. ಆದರೆ ಜನರ ತೆರಿಗೆ ಹಣವನ್ನು ಗುಣಾತ್ಮಕವಾಗಿ ಖರ್ಚು ಮಾಡುವ ಬಗ್ಗೆ ರಾಷ್ಟ್ರೀಯ ಪಕ್ಷಗಳಿಗೆ ಚಿಂತನೆ ಇಲ್ಲ- ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ಡಾ.ರಾಜ್ ಕುಮಾರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಬಂದಾಗ ಮಾತ್ರ ಉತ್ತರ ಭಾರತದ ರಾಷ್ಟ್ರೀಯ ಪಕ್ಷಗಳ ನಾಯಕರಿಗೆ ಕರ್ನಾಟಕ ನೆನಪು, ಮಮಕಾರ, ಪ್ರೀತಿ ಬರುತ್ತದೆ. ಅಕಾಲಿಕ ಮಳೆ ಬಂದಾಗ, ಬರಗಾಲ ಬಂದಾಗ, ಇನ್ನೇನೋ ಸಮಸ್ಯೆ ಆದಾಗ ನಮ್ಮ ರಾಜ್ಯ ನೆನಪು ಬರೋದಿಲ್ಲ, ಇತ್ತ ಸುಳಿಯುವುದಿಲ್ಲ ಎಂದು ಗುಡುಗಿದರು.
ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಕನ್ನಡ ನಾಡಿನ ಹಲವು ಸಮಸ್ಯೆಗಳನ್ನು ರಾಷ್ಟ್ರೀಯ ಪಕ್ಷಗಳಿಂದ ಬಗೆಹರಿಸಲು ಸಾಧ್ಯವಾಗಿಲ್ಲ.
ಪಂಚರತ್ನ ಯೋಜನೆ ಜಾರಿಗೆ ಆಗಬೇಕಾರೆ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಬೇಕು, ಕಾಂಗ್ರೆಸ್ ಅಥವಾ ಬಿಜೆಪಿ ಜೊತೆ ಕೈ ಜೋಡಿಸಿ ಸರ್ಕಾರ ರಚನೆ ಮಾಡಿದರೆ ಪಂಚರತ್ನ ಯೋಜನೆ ಜಾರಿಗೆ ತರಲು ಅಸಾಧ್ಯ ಆದ್ದರಿಂದ ಈ ಬಾರಿ ಹೆಚ್ಚು ಬಹುಮತ ನೀಡಬೇಕು ಆಗ ಸ್ವತಂತ್ರ ಸರ್ಕಾರ ರಚನೆ ಮಾಡಿ ಕನ್ನಡ ನಾಡನ್ನು ಅಭಿವೃದ್ಧಿ ಮಾಡುತ್ತೇನೆ ಎಂದರು.
ಕಮಿಷನ್ ಸರ್ಕಾರಗಳನ್ನು ತೊಲಗಿಸಲು ಜೆಡಿಎಸ್ ಗೆ ಶಕ್ತಿ ನೀಡಿ. ಪಂಚರತ್ನ ಯೋಜನೆ ಜಾರಿಗೆ ರಾಜ್ಯದ ಮೂಲೆ ಮೂಲೆಗೆ ಪ್ರವಾಸ ಮಾಡಿದ್ದೇನೆ. ನನಗೆ ಬಡವ ಶ್ರೀಮಂತ ಬೇಧಭಾವ ಇಲ್ಲ, ಜಾತಿ ಧರ್ಮ ಇಲ್ಲ ನನಗೆ ಎಲ್ಲರೂ ಒಂದೆ. ನೇಕಾರ, ಮಡಿವಾಳ ಸೇರಿ ಎಲ್ಲಾ ಸಮುದಾಯಕ್ಕೆ ಸಮನಾಗಿ ಎಲ್ಲಾ ಕಸುಬುಗಳಿಗೆ ಆರ್ಥಿಕ ಉತ್ತೇಜನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರು ಸ್ವಾಭಿಮಾನ, ಸ್ವಾವಲಂಬಿ ಬದುಕಿಗೆ ಆರ್ಥಿಕ ಸಹಾಯ ಮಾಡಲಾಗುವುದು ಎಂದರು.
ಕಮಿಷನ್ ಸರ್ಕಾರಕ್ಕೆ ಕಡಿವಾಣ ಹಾಕಿ ತೆರಿಗೆ ಹಣದಿಂದ ಎಲ್ಲಾ ಯೋಜನೆಗಳನ್ನು ಜಾರಿಗೆ ತರುತ್ತೇನೆ. ನೇಕಾರರಿಗೆ ವಸ್ತ್ರ ಬ್ಯಾಂಕ್ ಸ್ಥಾಪಿಸಿ ಮಾರುಕಟ್ಟೆ ಸೃಷ್ಟಿಸಲಾಗುವುದು ಎಂದರು.
ಮಿಸ್ಟರ್ ಕುಮಾರಸ್ವಾಮಿ ನೀನು ನೂರು ಪಂಚರತ್ನ ಯೋಜನೆ ಕೊಟ್ಟರು ನಿನಗೆ 20-25 ಸ್ಥಾನ ಗಟ್ಟಿ ಎಂದು ಸಿದ್ದರಾಮಯ್ಯ ಲೇವಡಿ ವಿಚಾರಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ
ಇಂತಹ ದುರಹಂಕಾರದ ಮಾತುಗಳನ್ನು ಬಿಡಬೇಕು. ಇದಕ್ಕೆ ಮುಂದೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.
ಆರೋಗ್ಯವನ್ನು ಲೆಕ್ಕಿಸದೆ ರಾಜ್ಯದ ಮೂಲೆ ಮೂಲೆ ಸುತ್ತಿದ್ದೇನೆ. ತಾಲ್ಲೂಕಿನಲ್ಲಿ ಮುನೇಗೌಡ ಮೂರು ಬಾರಿ ಸೋತು, ನಾಲ್ಕನೆಯ ಬಾರಿಗೆ ಸ್ಪರ್ಧಿಸಿದ್ದಾರೆ.. ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ನಾಲ್ಕನೇ ಬಾರಿಯಾದರೂ ಮೋಕ್ಷ ನೀಡಿ ಎಂದರು.
ದೊಡ್ಡಬಳ್ಳಾಪುರದ ಸ್ಥಳೀಯ ಸಮಸ್ಯೆಗಳಾದ ಯುಜಿಡಿ, ಎಂಎಸ್ಜಿಪಿ ಘಟಕಕ್ಕೆ ಬೀಗ, ನೇಕಾರರ ಮಗ್ಗಗಳಿಗೆ 25 ಹೆಚ್.ಪಿ ವರೆಗೆ ಸಬ್ಸಿಡಿ ನೀಡಿ, ರೈತರ ಹಾಲಿನ ಸಬ್ಸಿಡಿ ದರ 8 ರೂ.ಗೆ ಏರಿಕೆ ಮಾಡಲಾಗುವುದು ಎಂದರು.
ಇನ್ನು ನಮ್ಮ ರಾಜ್ಯ ರಾಮರಾಜ್ಯ ಆಗಬೇಕಾದರೆ ಪಂಚರತ್ನ ಯೋಜನೆ ಜಾರಿಯಾಗಬೇಕು ಹೀಗಾಗಿ ಬಹುಮತದ ಸರ್ಕಾರ ನೀಡಿ ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ತ.ನ ಪ್ರಭುದೇವ, ಇ ಕೃಷ್ಣಪ್ಪ, ಲಕ್ಷ್ಮೀಪತಯ್ಯ, ವೆಂಕಟೇಶ್ ಬಾಬು, ಡಾ.ವಿಜಯ್ ಕುಮಾರ್, ಹರೀಶ್ ಗೌಡ, ಹುಸ್ಕೂರು ಆನಂದ್, ವಡ್ಡರಹಳ್ಳಿ ರವಿ, ಕೆಂಪರಾಜು, ಸತ್ಯನಾರಾಯಣ, ಪದ್ಮಾವತಿ ಮುನೇಗೌಡ, ಮಲ್ಲೇಶ್, ಸುನೀಲ್, ಕನ್ನಡ ಪಕ್ಷದ ಸಂಜೀವ್ ನಾಯಕ್, ಡಿ ವೆಂಕಟೇಶ್ ಮತ್ತಿತರರು ಇದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…