ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.
ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.
ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.
ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…