ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.
ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.
ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.
ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…