ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.
ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.
ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.
ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…