ಕಾಂಪೌಂಡ್ ಹಾಕಿ ಸರ್ಕಾರಿ ಜಾಗವನ್ನು ಕಬಳಿಸಲು ಪ್ಲ್ಯಾನ್: ಗ್ರಾಮಸ್ಥರಿಂದ ದೂರು: ಬಾಶೆಟ್ಟಿಹಳ್ಳಿ ಪ.ಪಂ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ತೆರವು

ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.

ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.

ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.

ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು  ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.

ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ‌ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು‌ ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ‌ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.

ನಾವೇನು ಒತ್ತುವರಿ ಮಾಡಿಲ್ಲ. ಇದು ನಮ್ಮ ತಾತ, ಅಪ್ಪನ ಜಾಗ. ನಮ್ಮ ತಾತ ಆ ಕಾಲದಲ್ಲಿ ಸಾರ್ವಜನಿಕರ ನುಡಿ ನೀರಿಗಾಗಿ ಬಾವಿ ನಿರ್ಮಿಸಲು ಜಾಗವನ್ನು ದಾನ ಮಾಡಿದ್ದರು. ಈಗ ಈ ಬಾವಿ ಪಾಳು ಬಿದ್ದಿದೆ. ಆದ್ದರಿಂದ ನಮ್ಮ ಜಾಗದಲ್ಲಿ ನಾವು ಇದ್ದೇವೆ. ನಾವು ಯಾವ ಸರ್ಕಾರಿ ಜಾಗವನ್ನೂ ಒತ್ತುವರಿ ಮಾಡಿಲ್ಲ. ಈ ಜಾಗ ನಮ್ಮದು ಎನ್ನುವುದಕ್ಕೆ ನಮ್ಮ ಬಳಿ ಎಲ್ಲಾ ದಾಖಲಾತಿಗಳು ಇವೆ. ನಮ್ಮ ಸೈಟ್ ಮುಂದೆ ಸರ್ಕಾರಿ ರಸ್ತೆ ಇದೆ ಎಂದು ತಿಳಿಸಲಾಗಿದೆ. ಆದ್ದರಿಂದ ನಾವು ಪಿಟ್ ಗುಂಡಿ ನಿರ್ಮಾಣ ಮಾಡಿದ್ದೇವೆ ಎಂದು ಮನೆಯೊಡತಿ ಸ್ಪಷ್ಟಪಡಿಸಿದರು.

ಒತ್ತುವರಿ ತೆರವುಗೊಳಿಸುವ ವೇಳೆ ಅಧಿಕಾರಿಗಳು ಹಾಗೂ ಒತ್ತುವರಿದಾರರಿಂದ ಕೆಲಕಾಲ ವಾದ ವಿವಾದ ನಡೆಯಿತು.‌ ಪೊಲೀಸ್ ಅಧಿಕಾರಿಗಳ ಸಹಕಾರದಿಂದ ಒತ್ತುವರಿ ತೆರವು ಮಾಡಲಾಯಿತು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

7 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

8 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

9 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

9 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

13 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

20 hours ago