ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.
ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.
ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.
ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…