ಕಾಂಪೌಂಡ್ ಹಾಕಿ ಸರ್ಕಾರಿ ಜಾಗವನ್ನು ಕಬಳಿಸಲು ಪ್ಲ್ಯಾನ್: ಗ್ರಾಮಸ್ಥರಿಂದ ದೂರು: ಬಾಶೆಟ್ಟಿಹಳ್ಳಿ ಪ.ಪಂ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ತೆರವು

ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.

ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.

ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.

ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು  ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.

ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ‌ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು‌ ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ‌ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.

ನಾವೇನು ಒತ್ತುವರಿ ಮಾಡಿಲ್ಲ. ಇದು ನಮ್ಮ ತಾತ, ಅಪ್ಪನ ಜಾಗ. ನಮ್ಮ ತಾತ ಆ ಕಾಲದಲ್ಲಿ ಸಾರ್ವಜನಿಕರ ನುಡಿ ನೀರಿಗಾಗಿ ಬಾವಿ ನಿರ್ಮಿಸಲು ಜಾಗವನ್ನು ದಾನ ಮಾಡಿದ್ದರು. ಈಗ ಈ ಬಾವಿ ಪಾಳು ಬಿದ್ದಿದೆ. ಆದ್ದರಿಂದ ನಮ್ಮ ಜಾಗದಲ್ಲಿ ನಾವು ಇದ್ದೇವೆ. ನಾವು ಯಾವ ಸರ್ಕಾರಿ ಜಾಗವನ್ನೂ ಒತ್ತುವರಿ ಮಾಡಿಲ್ಲ. ಈ ಜಾಗ ನಮ್ಮದು ಎನ್ನುವುದಕ್ಕೆ ನಮ್ಮ ಬಳಿ ಎಲ್ಲಾ ದಾಖಲಾತಿಗಳು ಇವೆ. ನಮ್ಮ ಸೈಟ್ ಮುಂದೆ ಸರ್ಕಾರಿ ರಸ್ತೆ ಇದೆ ಎಂದು ತಿಳಿಸಲಾಗಿದೆ. ಆದ್ದರಿಂದ ನಾವು ಪಿಟ್ ಗುಂಡಿ ನಿರ್ಮಾಣ ಮಾಡಿದ್ದೇವೆ ಎಂದು ಮನೆಯೊಡತಿ ಸ್ಪಷ್ಟಪಡಿಸಿದರು.

ಒತ್ತುವರಿ ತೆರವುಗೊಳಿಸುವ ವೇಳೆ ಅಧಿಕಾರಿಗಳು ಹಾಗೂ ಒತ್ತುವರಿದಾರರಿಂದ ಕೆಲಕಾಲ ವಾದ ವಿವಾದ ನಡೆಯಿತು.‌ ಪೊಲೀಸ್ ಅಧಿಕಾರಿಗಳ ಸಹಕಾರದಿಂದ ಒತ್ತುವರಿ ತೆರವು ಮಾಡಲಾಯಿತು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

11 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

35 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago