ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.
ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.
ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.
ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…