ಕಾಂಪೌಂಡ್ ಹಾಕಿ ಸರ್ಕಾರಿ ಜಾಗವನ್ನು ಕಬಳಿಸಲು ಪ್ಲ್ಯಾನ್: ಗ್ರಾಮಸ್ಥರಿಂದ ದೂರು: ಬಾಶೆಟ್ಟಿಹಳ್ಳಿ ಪ.ಪಂ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ತೆರವು

ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.

ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.

ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.

ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು  ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.

ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ‌ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು‌ ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ‌ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.

ನಾವೇನು ಒತ್ತುವರಿ ಮಾಡಿಲ್ಲ. ಇದು ನಮ್ಮ ತಾತ, ಅಪ್ಪನ ಜಾಗ. ನಮ್ಮ ತಾತ ಆ ಕಾಲದಲ್ಲಿ ಸಾರ್ವಜನಿಕರ ನುಡಿ ನೀರಿಗಾಗಿ ಬಾವಿ ನಿರ್ಮಿಸಲು ಜಾಗವನ್ನು ದಾನ ಮಾಡಿದ್ದರು. ಈಗ ಈ ಬಾವಿ ಪಾಳು ಬಿದ್ದಿದೆ. ಆದ್ದರಿಂದ ನಮ್ಮ ಜಾಗದಲ್ಲಿ ನಾವು ಇದ್ದೇವೆ. ನಾವು ಯಾವ ಸರ್ಕಾರಿ ಜಾಗವನ್ನೂ ಒತ್ತುವರಿ ಮಾಡಿಲ್ಲ. ಈ ಜಾಗ ನಮ್ಮದು ಎನ್ನುವುದಕ್ಕೆ ನಮ್ಮ ಬಳಿ ಎಲ್ಲಾ ದಾಖಲಾತಿಗಳು ಇವೆ. ನಮ್ಮ ಸೈಟ್ ಮುಂದೆ ಸರ್ಕಾರಿ ರಸ್ತೆ ಇದೆ ಎಂದು ತಿಳಿಸಲಾಗಿದೆ. ಆದ್ದರಿಂದ ನಾವು ಪಿಟ್ ಗುಂಡಿ ನಿರ್ಮಾಣ ಮಾಡಿದ್ದೇವೆ ಎಂದು ಮನೆಯೊಡತಿ ಸ್ಪಷ್ಟಪಡಿಸಿದರು.

ಒತ್ತುವರಿ ತೆರವುಗೊಳಿಸುವ ವೇಳೆ ಅಧಿಕಾರಿಗಳು ಹಾಗೂ ಒತ್ತುವರಿದಾರರಿಂದ ಕೆಲಕಾಲ ವಾದ ವಿವಾದ ನಡೆಯಿತು.‌ ಪೊಲೀಸ್ ಅಧಿಕಾರಿಗಳ ಸಹಕಾರದಿಂದ ಒತ್ತುವರಿ ತೆರವು ಮಾಡಲಾಯಿತು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

5 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

5 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

17 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

20 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago