ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.
ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.
ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.
ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…