ಕಾಂಪೌಂಡ್ ಹಾಕಿ ಸರ್ಕಾರಿ ಜಾಗವನ್ನು ಕಬಳಿಸಲು ಪ್ಲ್ಯಾನ್: ಗ್ರಾಮಸ್ಥರಿಂದ ದೂರು: ಬಾಶೆಟ್ಟಿಹಳ್ಳಿ ಪ.ಪಂ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ತೆರವು

ದೊಡ್ಡಬಳ್ಳಾಪುರ:ಲಕ್ಷ ಲಕ್ಷ ಬೆಲೆ ಬಾಳುವ ಸರ್ಕಾರಿ ಜಾಗ ಕಬಳಿಕೆಗೆ ಮಂಜುನಾಥ್ ಮತ್ತ ಸುರೇಶ್ ಎನ್ನುವವರು ಪ್ಲ್ಯಾನ್ ಮಾಡಿ, ಆ ಜಾಗದಲ್ಲಿ ಪಿಟ್ ಗುಂಡಿ ನಿರ್ಮಿಸಿ ಕಾಂಪೌಂಡ್ ಹಾಕಲು ಯತ್ನಿಸಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ವ್ಯಾಪ್ತಿಯ ಎಳ್ಳುಪುರ ಗ್ರಾಮದಲ್ಲಿ ನಡೆದಿದೆ.

ಕೂಡಲೇ ಗ್ರಾಮಸ್ಥರು ಎಚ್ಚೆತ್ತುಕೊಂಡು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.

ದೂರಿನ ಮೇರೆಗೆ ಸ್ಥಳಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿದ್ದಾರೆ.

ಈ ಜಾಗದಲ್ಲಿ ಸಾರ್ವಜನಿಕರ ಕುಡಿಯುವ ನೀರಿಗಾಗಿ ನಿರ್ಮಿಸಿದ್ದ ಪುರಾತನ ಬಾವಿ ಇದೆ. ಈ ಜಾಗವನ್ನು ಮಂಜುನಾಥ್ ಮತ್ತು ಸುರೇಶ್ ಎನ್ನುವವರು ಒತ್ತುವರಿ ಮಾಡಲು ಯತ್ನಿಸಿದ್ದಾರೆ. ಇದು ಸರ್ಕಾರಿ ಜಾಗ. ಇದನ್ನು ಒತ್ತುವರಿ ಮಾಡಕೂಡದು ಎಂದು ಅವರು ಮನೆಕಟ್ಟುವಾಗಲೇ ನಾವು ಎಚ್ಚರಿಕೆ ನೀಡಲಾಗಿತ್ತು. ಅದೇರೀತಿ ಈ ಜಾಗಕ್ಕೆ ಕಾಂಪೌಂಡ್ ನಿರ್ಮಿಸುವಂತೆ ಪಟ್ಟಣ ಪಂಚಾಯಿತಿಗೆ ಅರ್ಜಿ ಹಾಕಿದ್ದೇವು. ಆದರೂ ಲಕ್ಷಾಂತರ ಬೆಲೆ ಬಾಳುವ ಜಾಗವನ್ನು ಒತ್ತುವರಿ ಮಾಡಲು ಮಂಜುನಾಥ್ ಮತ್ತು ಸುರೇಶ್ ಎನ್ನುವವರು  ಯತ್ನಿಸಿದ್ದಾರೆ ಎಂದು ಅದೇ ಗ್ರಾಮದ ಮಧುಚಂದ್ರ ಆರೋಪಿಸಿದ್ದಾರೆ.

ಒತ್ತುವರಿ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ವತಿಯಿಂದ ನೋಟಿಸ್ ಬಂದಿದ್ದರೂ ಅದನ್ನು ಲೆಕ್ಕಿಸದೆ ನಿನ್ನೆ ಭಾನುವಾರದಂದು ಪಿಟ್ ಗುಂಡಿ‌ ನಿರ್ಮಾಣ ಮಾಡಿ ಕಾಂಪೌಂಡ್ ಹಾಕಲು‌ ಯತ್ನಿಸಿದ್ದಾರೆ. ಈ ಸರ್ಕಾರಿ ಜಾಗವನ್ನು ಉಳಿಸಿ ಗ್ರಂಥಾಲಯ, ಕುಡಿಯುವ ನೀರಿನ ಘಟಕ ಇಲ್ಲಿ‌ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುಬಂತೆ ಮಾಡಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.

ನಾವೇನು ಒತ್ತುವರಿ ಮಾಡಿಲ್ಲ. ಇದು ನಮ್ಮ ತಾತ, ಅಪ್ಪನ ಜಾಗ. ನಮ್ಮ ತಾತ ಆ ಕಾಲದಲ್ಲಿ ಸಾರ್ವಜನಿಕರ ನುಡಿ ನೀರಿಗಾಗಿ ಬಾವಿ ನಿರ್ಮಿಸಲು ಜಾಗವನ್ನು ದಾನ ಮಾಡಿದ್ದರು. ಈಗ ಈ ಬಾವಿ ಪಾಳು ಬಿದ್ದಿದೆ. ಆದ್ದರಿಂದ ನಮ್ಮ ಜಾಗದಲ್ಲಿ ನಾವು ಇದ್ದೇವೆ. ನಾವು ಯಾವ ಸರ್ಕಾರಿ ಜಾಗವನ್ನೂ ಒತ್ತುವರಿ ಮಾಡಿಲ್ಲ. ಈ ಜಾಗ ನಮ್ಮದು ಎನ್ನುವುದಕ್ಕೆ ನಮ್ಮ ಬಳಿ ಎಲ್ಲಾ ದಾಖಲಾತಿಗಳು ಇವೆ. ನಮ್ಮ ಸೈಟ್ ಮುಂದೆ ಸರ್ಕಾರಿ ರಸ್ತೆ ಇದೆ ಎಂದು ತಿಳಿಸಲಾಗಿದೆ. ಆದ್ದರಿಂದ ನಾವು ಪಿಟ್ ಗುಂಡಿ ನಿರ್ಮಾಣ ಮಾಡಿದ್ದೇವೆ ಎಂದು ಮನೆಯೊಡತಿ ಸ್ಪಷ್ಟಪಡಿಸಿದರು.

ಒತ್ತುವರಿ ತೆರವುಗೊಳಿಸುವ ವೇಳೆ ಅಧಿಕಾರಿಗಳು ಹಾಗೂ ಒತ್ತುವರಿದಾರರಿಂದ ಕೆಲಕಾಲ ವಾದ ವಿವಾದ ನಡೆಯಿತು.‌ ಪೊಲೀಸ್ ಅಧಿಕಾರಿಗಳ ಸಹಕಾರದಿಂದ ಒತ್ತುವರಿ ತೆರವು ಮಾಡಲಾಯಿತು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago