ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಶ್ರೀ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು ಎಂದರು.
ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು – ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು. ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು ಎಂದು ಹೇಳಿದ್ದಾರೆ.
ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, “ಇವ ನಮ್ಮವ ಇವ ನಮ್ಮವ” ಎಂದಿದ್ದು. ಕುವೆಂಪು ಅವರು, “ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು” ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು, ಅಂಬೇಡ್ಕರ್, ಕುವೆಂಪು, ಸೂಫಿಗಳ ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…