Categories: ರಾಜ್ಯ

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು- ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು- ಸಿಎಂ ಸಿದ್ದರಾಮಯ್ಯ

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಶ್ರೀ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀ‌ ಕಾಗಿನೆಲೆ ಮಹಾಸಂಸ್ಥಾನ ಕನಕ‌ಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು ಎಂದರು.

ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು – ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು. ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು ಎಂದು ಹೇಳಿದ್ದಾರೆ.

ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, “ಇವ ನಮ್ಮವ ಇವ ನಮ್ಮವ” ಎಂದಿದ್ದು. ಕುವೆಂಪು ಅವರು, “ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು” ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು,  ಅಂಬೇಡ್ಕರ್, ಕುವೆಂಪು, ಸೂಫಿಗಳ  ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

11 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago