Categories: ರಾಜ್ಯ

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು- ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು- ಸಿಎಂ ಸಿದ್ದರಾಮಯ್ಯ

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಶ್ರೀ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀ‌ ಕಾಗಿನೆಲೆ ಮಹಾಸಂಸ್ಥಾನ ಕನಕ‌ಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು ಎಂದರು.

ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು – ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು. ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು ಎಂದು ಹೇಳಿದ್ದಾರೆ.

ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, “ಇವ ನಮ್ಮವ ಇವ ನಮ್ಮವ” ಎಂದಿದ್ದು. ಕುವೆಂಪು ಅವರು, “ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು” ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು,  ಅಂಬೇಡ್ಕರ್, ಕುವೆಂಪು, ಸೂಫಿಗಳ  ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 hour ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago