ಕಾಡನೂರಿನ‌ ಮಹೇಶ್ವರಮ್ಮ ದೇವಾಲಯದಲ್ಲಿ‌ ಪವಾಡ…!: ಕಣ್ಣುತೆರೆದ ಮಹೇಶ್ವರಮ್ಮ ವಿಗ್ರಹ ಮೂರ್ತಿ…!: ಭಕ್ತರಲ್ಲಿ ದಿಗ್ಭ್ರಮೆ…!: ಪವಾಡ ಕಣ್ತುಂಬಿಕೊಳ್ಳಲು ಹರಿದು ಬಂದ ಭಕ್ತಸಾಗರ

ನಿನ್ನೆ ಗುರು ಪೂರ್ಣಿಮೆ ನಾಡಿನಾದ್ಯಂತ ಮನೆ ಮಾಡಿತ್ತು. ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ಭಕ್ತರು ತಮ್ಮ ಇಷ್ಟ ದೇವರುಗಳ ಮೊರೆ ಹೋಗಿದ್ದರು.

ಈ ವೇಳೆ ತಾಲೂಕಿನ ದೇವಾಲಯವೊಂದರಲ್ಲಿ ಪವಾಡ ನಡೆದಿದೆ.‌ ವಿಗ್ರಹ ಮೂರ್ತಿ ಕಣ್ಣು ತೆರೆದ ರೀತಿಯಲ್ಲಿ ಭಕ್ತರಿಗೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಇದರಿಂದ ಭಕ್ತರು ಕೆಲಕಾಲ ದಿಗ್ಭ್ರಮೆಗೊಂಡಿದ್ದಾರೆ. ಇದೊಂದು ಪವಾಡವೆಂದು ಪರಿಗಣಿಸಿ ಸುತ್ತಮುತ್ತಲಿನ ಜನತೆ ದೇವರ ದರ್ಶನ ಪಡೆದಿದ್ದಾರೆ.

ತಾಲೂಕಿನ ಕಾಡನೂರು ಗ್ರಾಮದ ಮಹೇಶ್ವರಮ್ಮ ದೇವಸ್ಥಾನದಲ್ಲಿನ ಮಹೇಶ್ವರಮ್ಮ ವಿಗ್ರಹ ಕಣ್ಬಿಟ್ಟಿದ್ದು, ದೇವರ ಪವಾಡವೆಂದು ಜನರು ದೇವರ ದರ್ಶನ ಪಡೆಯುತ್ತಿದ್ದಾರೆ.

ಇಷ್ಟು ದಿನ ಸಾಮಾನ್ಯವಾಗಿ ಕಣ್ಣ್ಮುಚ್ಚಿದ ರೀತಿಯಲ್ಲಿ‌ ಇದ್ದ‌ ವಿಗ್ರಹ ಮೂರ್ತಿ ನಿನ್ನೆ‌ ಸಂಜೆ ದಿಢೀರನೆ ಕಣ್ಣು ತೆರೆದು ಭಕ್ತರಲ್ಲಿ ದಿಗ್ಭ್ರಾಂತಿ ಮೂಡಿಸಿದೆ ಎಂದು ಭಕ್ತರೊಬ್ಬರು ತಿಳಿಸಿದ್ದಾರೆ.

Ramesh Babu

Journalist

Recent Posts

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

20 hours ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

1 day ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

2 days ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

2 days ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 days ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

2 days ago