ನಿನ್ನೆ ಗುರು ಪೂರ್ಣಿಮೆ ನಾಡಿನಾದ್ಯಂತ ಮನೆ ಮಾಡಿತ್ತು. ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ಭಕ್ತರು ತಮ್ಮ ಇಷ್ಟ ದೇವರುಗಳ ಮೊರೆ ಹೋಗಿದ್ದರು.
ಈ ವೇಳೆ ತಾಲೂಕಿನ ದೇವಾಲಯವೊಂದರಲ್ಲಿ ಪವಾಡ ನಡೆದಿದೆ. ವಿಗ್ರಹ ಮೂರ್ತಿ ಕಣ್ಣು ತೆರೆದ ರೀತಿಯಲ್ಲಿ ಭಕ್ತರಿಗೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಇದರಿಂದ ಭಕ್ತರು ಕೆಲಕಾಲ ದಿಗ್ಭ್ರಮೆಗೊಂಡಿದ್ದಾರೆ. ಇದೊಂದು ಪವಾಡವೆಂದು ಪರಿಗಣಿಸಿ ಸುತ್ತಮುತ್ತಲಿನ ಜನತೆ ದೇವರ ದರ್ಶನ ಪಡೆದಿದ್ದಾರೆ.
ತಾಲೂಕಿನ ಕಾಡನೂರು ಗ್ರಾಮದ ಮಹೇಶ್ವರಮ್ಮ ದೇವಸ್ಥಾನದಲ್ಲಿನ ಮಹೇಶ್ವರಮ್ಮ ವಿಗ್ರಹ ಕಣ್ಬಿಟ್ಟಿದ್ದು, ದೇವರ ಪವಾಡವೆಂದು ಜನರು ದೇವರ ದರ್ಶನ ಪಡೆಯುತ್ತಿದ್ದಾರೆ.
ಇಷ್ಟು ದಿನ ಸಾಮಾನ್ಯವಾಗಿ ಕಣ್ಣ್ಮುಚ್ಚಿದ ರೀತಿಯಲ್ಲಿ ಇದ್ದ ವಿಗ್ರಹ ಮೂರ್ತಿ ನಿನ್ನೆ ಸಂಜೆ ದಿಢೀರನೆ ಕಣ್ಣು ತೆರೆದು ಭಕ್ತರಲ್ಲಿ ದಿಗ್ಭ್ರಾಂತಿ ಮೂಡಿಸಿದೆ ಎಂದು ಭಕ್ತರೊಬ್ಬರು ತಿಳಿಸಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…