Categories: ಕೋಲಾರ

ಕಾಡಾನೆಗಳ ಹಾವಳಿ ನಷ್ಟಕ್ಕೆ ಪರಿಹಾರ ನೀಡಿ: ರೈತ ಸಂಘದಿಂದ ಡಿಎಫ್ಒಗೆ ಮನವಿ

 

ಕೋಲಾರ: ಗಡಿಭಾಗಗಳಲ್ಲಿ ರೈತರ ಬೆಳೆ ನಾಶಮಾಡುತ್ತಿರುವ ಕಾಡಾನೆಗಳು ಹಾಗೂ ಕಾಡಂದಿಗಳ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೆ ೫ ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ರೈತ ಸಂಘದಿಂದ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಕಳ್ಳರು ಬಂದು ಊರು ದೋಚಿದ ಮೇಲೆ ಊರ ಬಾಗಿಲು ಹಾಕಿದರೂ ಎಂಬ ಗಾದೆಯಂತೆ ಕಾಡಾನೆಗಳಿಂದ ರೈತರ ಬೆವರು ಸುರಿಸಿ ಬೆಳೆದ ಬೆಳೆ ನಾಶವಾದ ನಂತರ ಪತ್ತೆಯಾಗುವ ಅರಣ್ಯ ಅಧಿಕಾರಿಗಳ ರೈತ ವಿರೋಧಿ ದೋರಣೆ ಹಾಗೂ ಗಡಿಭಾಗದ ರೈತರ ಪಾಲಿಗೆ ಯಮಕಿಂಕರಾಗಿರುವ ಜನ ಪ್ರತಿನಿಧಿಗಳ ವಿರುದ್ದ ಗಡಿಭಾಗದ ನೊಂದ ರೈತ ಅಪ್ಪೋಜಿರಾವ್, ಶ್ರೀರಾಮಪ್ಪ ಆಕ್ರೋಷ ವ್ಯಕ್ತಪಡಿಸಿದರು.

ಮುಂಗಾರು ಮಳೆಯಿಲ್ಲದೆ ಬೆಳೆ ನಷ್ಟವಾಗಿ ಹಿಂಗಾರು ಮಳೆಯಿಂದ ಕೈಗೆ ಬಂದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ಜೊತೆಗೆ ಅಲ್ಪ ಸ್ವಲ್ಪ ಉಳಿದಿರುವ ಬೆಳೆಯನ್ನು ಕಾಡಾನೆಗಳು ರಾತ್ರೋ ರಾತ್ರಿ ನಾಶ ಮಾಡಿದರೆ ಉಳಿಕೆ ಇರುವ ಬೆಳೆಯನ್ನು ಕಾಡು ಹಂದಿಗಳು ಸಂಪೂರ್ಣವಾಗಿ ನಾಶಮಾಡಿ ರೈತರ ಬದುಕನ್ನು ಬೀದಿಗೆ ಬಿದ್ದಿದ್ದರೂ ಸರ್ಕಾರಗಳು ರೈತರ ಜೀವನದ ಜೊತೆ ಚಲ್ಲಾಟವಾಡಿದರೆ ಮತ್ತೊಂದಡೆ ಕಷ್ಟಾಪಟ್ಟು ರಾತ್ರಿ ಹಗಲು ಬೆವರು ಸುರಿಸಿ ಬೆಳೆದ ಬೆಳೆ ಕೈಗೆ ಬರುವ ಸಮಯದಲ್ಲಿ ರಾತ್ರೋರಾತ್ರಿ ಕಾಡಾನೆಗಳು ಸಂಪೂರ್ಣವಾಗಿ ನಾಶ ಮಾಡುತ್ತಿದ್ದು, ಬೆಳೆಯನ್ನು ರಕ್ಷಣೆ ಮಾಡದೆ ಪ್ರಾಣವನ್ನು ರಕ್ಷಣೆ ಮಾಡಿಕೊಳ್ಳದೆ ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಗಡಿಭಾಗದ ರೈತರ ಕಾಡಾನೆಗಳ ಹಾವಳಿಗೆ ಶಾಶ್ವತ ಕೊಡುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪ ಮಾಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಗಡಿಭಾಗದ ರೈತರ ಪಾಲಿಗೆ ಕ್ಷೇತ್ರದ ಜನ ಪ್ರತಿನಿಧಿಗಳು ಅರಣ್ಯ ಅಧಿಕಾರಿಗಳು ಇದ್ದು, ಇಲ್ಲದಂತಾಗಿದ್ದಾರೆ. ಕಾಡಾನೆಗಳ ಹಾಳಿಯಿಂದ ಬೆಳೆ ನಷ್ಟವಾಗುತ್ತಿದ್ದರೂ ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ರೈತರ ಕಷ್ಟಗಳಿಗೆ ಸ್ಪಂಧಿಸುತ್ತಿಲ್ಲ. ಒಂದು ಕಡೆ ಬೆಳೆಯು ಇಲ್ಲ ಮತ್ತೊಂದು ಕಡೆ ಪರಿಹಾರವು ಇಲ್ಲದೆ ಜಾತಕ ಪಕ್ಷಿಗಳಂತೆ ರೈತರು ಕಣ್ಣೀರು ಸುರಿಸುತ್ತಿದ್ದರೂ, ಮನ ಕರಗದ ಅಧಿಕಾರಿಗಳ ಜನ ಪ್ರತಿನಿಧಿಗಳ ರೈತ ವಿರೋಧಿ ದೋರಣೆಗೆ ಆಕ್ರೋಷ ವ್ಯಕ್ತಪಡಿಸಿದರು.

ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಕಾಡಾನೆಗಳ ಹಾವಳಿಗೆ ಅಭಿವೃದ್ದಿಪಡಿಸಿರುವ ಸೋಲರ್ ನಿರ್ವಹಣೆ ಇದ್ದು ಇಲ್ಲದಂತಾಗಿದೆ. ಗಡಿಭಾಗದಲ್ಲಿ ಸೋಲಾರ್ ಕಂಬಗಳನ್ನೇ ನೆಲಕ್ಕೆ ಉರುಳಿಸಿ ಕಟಾವಿಗೆ ಬಂದಿದ್ದ, ರಾಗಿ, ಭತ್ತ ಮತ್ತಿತರ ವಾಣಿಜ್ಯ ಬೆಳೆಗಳನ್ನು ನಾಶ ಮಾಡಿದ್ದರೂ ಸ್ಥಳಕ್ಕೆ ಬೇಟಿ ನೀಡದ ತಾಲ್ಲೂಕಾಡಳಿತದ ವಿರುದ್ದ ಕಿಡಿ ಕಾರಿದರು.

ಒಂದು ವಾರದೊಳಗೆ ಕಾಡಾನೆ ಹಾಗೂ ಕಾಡು ಹಂದಿಗಳ ಹಾವಳಿಯಿಂದ ನಷ್ಟವಾಗಿರುವ ಪ್ರತಿ ಎಕರೆಗೆ ೫ ಲಕ್ಷ ಪರಿಹಾರ ವಿತರಣೆ ಮಾಡಿ ಕಾಡಾನೆಗಳನ್ನು ನಿಯಂತ್ರಿಸಲು ವಿಶೇಷ ತಂಡ ರಚನೆ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಿ ಶಾಶ್ವತ ಪರಿಹಾರ ಕೊಡಿ ಇಲ್ಲವೆ ಆನೆ ಹಿಡಿಯಲು ಆದೇಶವನ್ನಾದರೂ ಕೊಡಿ ಸ್ವಾಮಿ ಇಲ್ಲವಾದರೆ ಬುಡ್ಡಿ ದೀಪಗಳೊಂದಿಗೆ ಶಾಸಕರ ಮತ್ತು ಅರಣ್ಯ ಅಧಿಕಾರಿಗಳ ಮನೆ ಮುಂದೆ ಹೋರಾಟ ಮಾಡುವ ಮುಖಾಂತರ ನ್ಯಾಯ ಪಡೆದುಕೊಳ್ಳುವ ಎಚ್ಚರಿಕೆಯ ಜೊತೆಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲು, ಗಡಿಭಾಗದ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕಾಡಾನೆಗಳಿಂದ ರೈತರ ಬೆಳೆ ಪ್ರಾಣ ರಕ್ಷಣೆ ಮಾಡುವ ಜೊತೆಗೆ ದ್ವನಿವರ್ದಕ ಮುಖಾಂತರ ರೈತರಲ್ಲಿ ಜಾಗೃತಿ ಮೂಡಿಸಿ ಬೆಳೆ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಗೊಲ್ಲಹಟ್ಟಿ ಲಕ್ಷಣ್, ಗೋವಿಂದಪ್ಪ, ಸುರೇಶ್, ಕಾಮುಸಮುದ್ರ ಹೋ.ಅ ಮುನಿಕೃಷ್ಣ, ಹಸಿರು ಸೇನೆ ಜಿಲ್ಲಾದ್ಯಕ್ಷ ಕಿರಣ್, ಜಿಲ್ಲಾ ಉಪಾಧ್ಯಕ್ಷ ಚಾಂದ್‌ಪಾಷ, ಯಾರಂಘಟ್ಟ ಗೀರಿಶ್, ಶೈಲಜ, ರಾಧ, ಶೋಭ, ಚೌಡಮ್ಮ, ಲಕ್ಷಮ್ಮ, ಸುಗುಣ, ಮುಂತಾದವರಿದ್ದರು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

6 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

6 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

8 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

11 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

13 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

17 hours ago