Categories: ಕೋಲಾರ

ಕಾಡಾನೆಗಳ ಹಾವಳಿ ನಿಯಂತ್ರಣ ಗುಣಮಟ್ಟದ ವಿದ್ಯುತ್ ಒತ್ತಾಯಿಸಿ ರೈತ ಸಂಘ ಒತ್ತಾಯ

ಕೋಲಾರ: ಕಾಡಾನೆಗಳ ಹಾವಳಿಯಿರುವ ಗಡಿಭಾಗದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ 10 ತಾಸು ಗುಣಮಟ್ಟದ ವಿದ್ಯುತ್ ನೀಡಿ ನಿರಂತರ ಜ್ಯೋತಿಯಲ್ಲಿ ರಾತ್ರಿ ವೇಳೆ ವಿದ್ಯುತ್ ನೀಡಿ ರೈತರ ಪ್ರಾಣ ಹಾಗೂ ಬೆಳೆಯನ್ನು ರಕ್ಷಣೆ ಮಾಡಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ರೈತಸಂಘದಿಂದ ಮನವಿ ನೀಡಿ ಒತ್ತಾಯಿಸಲಾಯಿತು.

ಪ್ರತಿ ವರ್ಷ ಬೇಸಿಗೆ ಪ್ರಾರಂಭವಾಯಿತು ಎಂದರೆ ರೈತರಿಗೆ ನೀಡುವ ವಿದ್ಯುತ್ ನಲ್ಲಿ ಕಡಿತ ಮಾಡಿ ಸಂಸ್ಥೆಗೆ ಉಳಿತಾಯ ಮಾಡಿದರೆ ಬೆಸ್ಕಾಂ ಅಧಿಕಾರಿಗಳಿಗೆ ಇಂಧನ ಸಚಿವರು ಚಿನ್ನದ ಪದಕ ನೀಡುತ್ತಾರೆಯೇ ಎಂದು ಗ್ರಾಮೀಣ ಪ್ರದೇಶದ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳನ್ನು ರೈತಸಂಘದ ತಾಲೂಕು ಅಧ್ಯಕ್ಷ ಕದಿರಿನತ್ತ ಅಪ್ಪೋಜಿರಾವ್ ಪ್ರಶ್ನೆ ಮಾಡಿದರು

ಹದಗೆಟ್ಟಿರುವ ರಸ್ತೆಗಳು ಮೂಲಭೂತ ಸೌಕರ್ಯಗಳಿಲ್ಲದ ಗಡಿಭಾಗದ ರೈತರ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳಲು ಮನೆ, ಸಂಸಾರ ಬಿಟ್ಟು ಜೀವವನ್ನು ಅಂಗೈಯಲ್ಲಿಟ್ಟುಕೊಂಡು ಕೊಳವೆಬಾವಿಗಳ ಹತ್ತಿರ ರಾತ್ರಿ ಪೂರ್ತಿ ಶಿವರಾತ್ರಿ ಜಾಗರಣೆ ಮಾಡುವ ೬ನೇ ಭಾಗ್ಯವನ್ನು ಬೆಸ್ಕಾಂ ಅಧಿಕಾರಿಗಳು ನೀಡಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸಿ ವ್ಯಂಗ್ಯವಾಡಿದರು.

ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ ಮಾತನಾಡಿ, ರಾತ್ರಿ ಹಗಲು ಎನ್ನದೆ ಬೆವರು ಸುರಿಸಿ ಕೃಷಿ ಭೂಮಿಯಲ್ಲಿ ಬೆಳೆ ತೆಗೆಯುವ ರೈತ ಸ್ವಾರ್ಥಕ್ಕಾಗಿ ವ್ಯವಸಾಯ ಮಾಡುತ್ತಿಲ್ಲ. ಈ ದೇಶಕ್ಕೆ ಅನ್ನ ಹಾಕುವ ಅನ್ನದಾತನನ್ನು ದೇವರು ಎಂದು ಪೂಜಿಸಬೇಕಾದ ಬೆಸ್ಕಾಂ ಅಧಿಕಾರಿಗಳು ರೈತರು ಬೆಳೆದ ಅನ್ನವನ್ನು ತಿಂದು ರೈತರಿಗೇ ದ್ರೋಹ ಮಾಡುವುದೆಂದರೆ ಸಮರ್ಪಕವಾದ ವಿದ್ಯುತ್ ನೀಡದೆ ಅವರ ಜೀವನದ ಜೊತೆ ಚೆಲ್ಲಾಟವಾಡುವುದು ಅಧಿಕಾರಿಗಳ ಘನತೆಗೆ ಗೌರವವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಒಂದು ಕಡೆ ಕಾಡಾನೆಗಳ ಹಾವಳಿ ಮತ್ತೊಂದೆಡೆ ನಕಲಿ ಬಿತ್ತನೆ ಬೀಜ ಕೀಟನಾಶಕಗಳ ಮಧ್ಯೆ ಬೆಳೆಯನ್ನು ಮಗುವಂತೆ ಸಾಕಿ ಇನ್ನೇನು ಮಾರುಕಟ್ಟೆಯಲ್ಲಿ ಉತ್ತಮವಾದ ಬೆಲೆ ಇದೆ ನಮ್ಮ ಕಷ್ಟ ತೀರುತ್ತದೆ ಎಂದು ನಿರೀಕ್ಷೆಯಲ್ಲಿದ್ದ ರೈತನಿಗೆ ಒಂದೇ ರಾತ್ರಿ ಬೆಸ್ಕಾಂ ಅಧಿಕಾರಿಗಳ ರೈತ ವಿರೋಧಿ ಧೋರಣೆಯಿಂದ ಸಮರ್ಪಕವಾದ ವಿದ್ಯುತ್ ಇಲ್ಲದೆ ಬೆಳೆಗೆ ನೀರು ಸಾಕಾಗದೆ ಕಣ್ಣ ಮುಂದೆಯೇ ಬೆಳೆ ನಷ್ಟವಾಗಿ ಹಾಕಿದ ಬಂಡವಾಳ ಕೈಗೆ ಸಿಗದೆ ನಾಶವಾಗುತ್ತಿರುವ ಬೆಳೆ ನೋಡಿ ರೈತನಿಗೆ ಹೃದಯಾಘಾತ ಇಲ್ಲವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಭಾಗ್ಯವನ್ನು ಬೆಸ್ಕಾಂ ಅಧಿಕಾರಿಗಳು ನೀಡುತ್ತಿದ್ದಾರೆಂದು ಆರೋಪಿಸಿದರು.

ಕೊಡುವ ವಿದ್ಯುತ್ ಅನ್ನು ಸಮರ್ಪಕವಾಗಿ ಗುಣಮಟ್ಟವಿಲ್ಲದೆ ನೀಡಿ ಕೃಷಿ ಪಂಪ್ ಸೆಟ್ ಗಳು
ಸುಟ್ಟು ಅದನ್ನು ರಿಪೇರಿ ಮಾಡಲು ಸಾವಿರಾರು ರೂಪಾಯಿ ಸುರಿಯುವ ಜೊತೆಗೆ ಟಿಸಿ ಸುಟ್ಟರೆ 24 ಗಂಟೆಯಲ್ಲಿ ಅಳವಡಿಸದೆ ನಷ್ಟದಲ್ಲಿರುವ ರೈತರ ಹತ್ತಿರ ಹಣ ವಸೂಲಿ ಮಾಡುವ ಮೂಲಕ ಬೆಸ್ಕಾಂ ಇಲಾಖೆಯಲ್ಲಿ ರೈತರ ಶೋಷಣೆ ಭ್ರಷ್ಟಾಚಾರ ನಿರಂತರವಾಗಿದೆ ಎಂದು ಆರೋಪಿಸಿದರು.

ಹಿರಿಯ ಅಧಿಕಾರಿಗಳು ಗಡಿಭಾಗದ ಕಾಡಾನೆಗಳ ಹಾವಳಿಯಿರುವ ಗ್ರಾಮೀಣ ಪ್ರದೇಶಗಳಿಗೆ
ಗುಣಮಟ್ಟದ 10 ತಾಸು ರೈತರ ಬೇಡಿಕೆಯಂತೆ ವಿದ್ಯುತ್ ನೀಡಬೇಕು. ನಿರಂತರ ಜ್ಯೋತಿಯಲ್ಲಿ ರಾತ್ರಿ ವೇಳೆ ವಿದ್ಯುತ್ ಕಡಿತ ಆಗದಂತೆ ಜಾಗೃತಿವಹಿಸಿ ರೈತರ ಪ್ರಾಣ ಬೆಳೆಯನ್ನು ರಕ್ಷಣೆ ಮಾಡಬೇಕೆಂದು ಮಾನ್ಯರಲ್ಲಿ ಒತ್ತಾಯ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಬೆಸ್ಕಾಂ ಅಧಿಕಾರಿಗಳಾದ ಮೋಹನ್ ಅವರು, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದರು.

 

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

3 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago