Categories: ಕೋಲಾರ

ಕಾಡಾನೆಗಳ ಹಾವಳಿ ನಿಯಂತ್ರಣ ಗುಣಮಟ್ಟದ ವಿದ್ಯುತ್ ಒತ್ತಾಯಿಸಿ ರೈತ ಸಂಘ ಒತ್ತಾಯ

ಕೋಲಾರ: ಕಾಡಾನೆಗಳ ಹಾವಳಿಯಿರುವ ಗಡಿಭಾಗದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ 10 ತಾಸು ಗುಣಮಟ್ಟದ ವಿದ್ಯುತ್ ನೀಡಿ ನಿರಂತರ ಜ್ಯೋತಿಯಲ್ಲಿ ರಾತ್ರಿ ವೇಳೆ ವಿದ್ಯುತ್ ನೀಡಿ ರೈತರ ಪ್ರಾಣ ಹಾಗೂ ಬೆಳೆಯನ್ನು ರಕ್ಷಣೆ ಮಾಡಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ರೈತಸಂಘದಿಂದ ಮನವಿ ನೀಡಿ ಒತ್ತಾಯಿಸಲಾಯಿತು.

ಪ್ರತಿ ವರ್ಷ ಬೇಸಿಗೆ ಪ್ರಾರಂಭವಾಯಿತು ಎಂದರೆ ರೈತರಿಗೆ ನೀಡುವ ವಿದ್ಯುತ್ ನಲ್ಲಿ ಕಡಿತ ಮಾಡಿ ಸಂಸ್ಥೆಗೆ ಉಳಿತಾಯ ಮಾಡಿದರೆ ಬೆಸ್ಕಾಂ ಅಧಿಕಾರಿಗಳಿಗೆ ಇಂಧನ ಸಚಿವರು ಚಿನ್ನದ ಪದಕ ನೀಡುತ್ತಾರೆಯೇ ಎಂದು ಗ್ರಾಮೀಣ ಪ್ರದೇಶದ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳನ್ನು ರೈತಸಂಘದ ತಾಲೂಕು ಅಧ್ಯಕ್ಷ ಕದಿರಿನತ್ತ ಅಪ್ಪೋಜಿರಾವ್ ಪ್ರಶ್ನೆ ಮಾಡಿದರು

ಹದಗೆಟ್ಟಿರುವ ರಸ್ತೆಗಳು ಮೂಲಭೂತ ಸೌಕರ್ಯಗಳಿಲ್ಲದ ಗಡಿಭಾಗದ ರೈತರ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳಲು ಮನೆ, ಸಂಸಾರ ಬಿಟ್ಟು ಜೀವವನ್ನು ಅಂಗೈಯಲ್ಲಿಟ್ಟುಕೊಂಡು ಕೊಳವೆಬಾವಿಗಳ ಹತ್ತಿರ ರಾತ್ರಿ ಪೂರ್ತಿ ಶಿವರಾತ್ರಿ ಜಾಗರಣೆ ಮಾಡುವ ೬ನೇ ಭಾಗ್ಯವನ್ನು ಬೆಸ್ಕಾಂ ಅಧಿಕಾರಿಗಳು ನೀಡಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸಿ ವ್ಯಂಗ್ಯವಾಡಿದರು.

ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ ಮಾತನಾಡಿ, ರಾತ್ರಿ ಹಗಲು ಎನ್ನದೆ ಬೆವರು ಸುರಿಸಿ ಕೃಷಿ ಭೂಮಿಯಲ್ಲಿ ಬೆಳೆ ತೆಗೆಯುವ ರೈತ ಸ್ವಾರ್ಥಕ್ಕಾಗಿ ವ್ಯವಸಾಯ ಮಾಡುತ್ತಿಲ್ಲ. ಈ ದೇಶಕ್ಕೆ ಅನ್ನ ಹಾಕುವ ಅನ್ನದಾತನನ್ನು ದೇವರು ಎಂದು ಪೂಜಿಸಬೇಕಾದ ಬೆಸ್ಕಾಂ ಅಧಿಕಾರಿಗಳು ರೈತರು ಬೆಳೆದ ಅನ್ನವನ್ನು ತಿಂದು ರೈತರಿಗೇ ದ್ರೋಹ ಮಾಡುವುದೆಂದರೆ ಸಮರ್ಪಕವಾದ ವಿದ್ಯುತ್ ನೀಡದೆ ಅವರ ಜೀವನದ ಜೊತೆ ಚೆಲ್ಲಾಟವಾಡುವುದು ಅಧಿಕಾರಿಗಳ ಘನತೆಗೆ ಗೌರವವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಒಂದು ಕಡೆ ಕಾಡಾನೆಗಳ ಹಾವಳಿ ಮತ್ತೊಂದೆಡೆ ನಕಲಿ ಬಿತ್ತನೆ ಬೀಜ ಕೀಟನಾಶಕಗಳ ಮಧ್ಯೆ ಬೆಳೆಯನ್ನು ಮಗುವಂತೆ ಸಾಕಿ ಇನ್ನೇನು ಮಾರುಕಟ್ಟೆಯಲ್ಲಿ ಉತ್ತಮವಾದ ಬೆಲೆ ಇದೆ ನಮ್ಮ ಕಷ್ಟ ತೀರುತ್ತದೆ ಎಂದು ನಿರೀಕ್ಷೆಯಲ್ಲಿದ್ದ ರೈತನಿಗೆ ಒಂದೇ ರಾತ್ರಿ ಬೆಸ್ಕಾಂ ಅಧಿಕಾರಿಗಳ ರೈತ ವಿರೋಧಿ ಧೋರಣೆಯಿಂದ ಸಮರ್ಪಕವಾದ ವಿದ್ಯುತ್ ಇಲ್ಲದೆ ಬೆಳೆಗೆ ನೀರು ಸಾಕಾಗದೆ ಕಣ್ಣ ಮುಂದೆಯೇ ಬೆಳೆ ನಷ್ಟವಾಗಿ ಹಾಕಿದ ಬಂಡವಾಳ ಕೈಗೆ ಸಿಗದೆ ನಾಶವಾಗುತ್ತಿರುವ ಬೆಳೆ ನೋಡಿ ರೈತನಿಗೆ ಹೃದಯಾಘಾತ ಇಲ್ಲವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಭಾಗ್ಯವನ್ನು ಬೆಸ್ಕಾಂ ಅಧಿಕಾರಿಗಳು ನೀಡುತ್ತಿದ್ದಾರೆಂದು ಆರೋಪಿಸಿದರು.

ಕೊಡುವ ವಿದ್ಯುತ್ ಅನ್ನು ಸಮರ್ಪಕವಾಗಿ ಗುಣಮಟ್ಟವಿಲ್ಲದೆ ನೀಡಿ ಕೃಷಿ ಪಂಪ್ ಸೆಟ್ ಗಳು
ಸುಟ್ಟು ಅದನ್ನು ರಿಪೇರಿ ಮಾಡಲು ಸಾವಿರಾರು ರೂಪಾಯಿ ಸುರಿಯುವ ಜೊತೆಗೆ ಟಿಸಿ ಸುಟ್ಟರೆ 24 ಗಂಟೆಯಲ್ಲಿ ಅಳವಡಿಸದೆ ನಷ್ಟದಲ್ಲಿರುವ ರೈತರ ಹತ್ತಿರ ಹಣ ವಸೂಲಿ ಮಾಡುವ ಮೂಲಕ ಬೆಸ್ಕಾಂ ಇಲಾಖೆಯಲ್ಲಿ ರೈತರ ಶೋಷಣೆ ಭ್ರಷ್ಟಾಚಾರ ನಿರಂತರವಾಗಿದೆ ಎಂದು ಆರೋಪಿಸಿದರು.

ಹಿರಿಯ ಅಧಿಕಾರಿಗಳು ಗಡಿಭಾಗದ ಕಾಡಾನೆಗಳ ಹಾವಳಿಯಿರುವ ಗ್ರಾಮೀಣ ಪ್ರದೇಶಗಳಿಗೆ
ಗುಣಮಟ್ಟದ 10 ತಾಸು ರೈತರ ಬೇಡಿಕೆಯಂತೆ ವಿದ್ಯುತ್ ನೀಡಬೇಕು. ನಿರಂತರ ಜ್ಯೋತಿಯಲ್ಲಿ ರಾತ್ರಿ ವೇಳೆ ವಿದ್ಯುತ್ ಕಡಿತ ಆಗದಂತೆ ಜಾಗೃತಿವಹಿಸಿ ರೈತರ ಪ್ರಾಣ ಬೆಳೆಯನ್ನು ರಕ್ಷಣೆ ಮಾಡಬೇಕೆಂದು ಮಾನ್ಯರಲ್ಲಿ ಒತ್ತಾಯ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಬೆಸ್ಕಾಂ ಅಧಿಕಾರಿಗಳಾದ ಮೋಹನ್ ಅವರು, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದರು.

 

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

4 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

7 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

9 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

20 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago