ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು ಬೆಳಿಗ್ಗೆ 6.45ರ ಸಮಯದಲ್ಲಿ ನಡೆದಿದೆ.
ಆನೆ ತುಳಿತಕ್ಕೆ ಸುಮಾರು 63 ವರ್ಷದ ಅಯ್ಯಮಾಡ ಮಾದಯ್ಯ( ಬೊಗ್ಗ) ಮೃತಪಟ್ಟಿದ್ದಾರೆ.
ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ರೈತರ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು, ಕಾಫಿ, ಬೆಳೆಗಾರರು ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.
ಕಾಡಾನೆ ತುಳಿತಕ್ಕೆ ಮೃತಪಟ್ಟ ಬೀರುಗ ಗ್ರಾಮದ ಅಯ್ಯಮಡ ಮಾದಯ್ಯ ಅವರ ಕುಟುಂಬಕ್ಕೆ ಡಿ. ಎಫ್.ಓ ಭಾಸ್ಕರ್ ರವರು 15ಲಕ್ಷ ರೂಪಾಯಿ ಚೆಕ್ಕನ್ನು ಹತ್ತಾಂತರಿಸಿದ್ದಾರೆ.
ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಎ.ಸಿ.ಎಫ್ ನೆಹರು, ರೈತ ಸಂಘದ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…