Categories: ಕೊಡಗು

ಕಾಡಾನೆ ತುಳಿತಕ್ಕೆ ಓರ್ವ ಬಲಿ: ವನ್ಯ ಪ್ರಾಣಿಗಳ ಉಪಟಳ: ಸಂಕಷ್ಟಕ್ಕೀಡಾದ ರೈತರು

ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು ಬೆಳಿಗ್ಗೆ 6.45ರ ಸಮಯದಲ್ಲಿ ನಡೆದಿದೆ.

ಆನೆ ತುಳಿತಕ್ಕೆ ಸುಮಾರು 63 ವರ್ಷದ ಅಯ್ಯಮಾಡ ಮಾದಯ್ಯ( ಬೊಗ್ಗ) ಮೃತಪಟ್ಟಿದ್ದಾರೆ.

ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ರೈತರ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು, ಕಾಫಿ, ಬೆಳೆಗಾರರು ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ಕಾಡಾನೆ ತುಳಿತಕ್ಕೆ ಮೃತಪಟ್ಟ ಬೀರುಗ ಗ್ರಾಮದ ಅಯ್ಯಮಡ ಮಾದಯ್ಯ ಅವರ ಕುಟುಂಬಕ್ಕೆ ಡಿ. ಎಫ್.ಓ ಭಾಸ್ಕರ್ ರವರು 15ಲಕ್ಷ ರೂಪಾಯಿ ಚೆಕ್ಕನ್ನು ಹತ್ತಾಂತರಿಸಿದ್ದಾರೆ.

ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ,  ಎ.ಸಿ.ಎಫ್  ನೆಹರು, ರೈತ ಸಂಘದ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago