ಕಾಣೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಶವವಾಗಿ ಪತ್ತೆ

ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಮೃತನನ್ನು ಜೋಡಿ ಕಾರೇಪುರ (ತಾಡಿಪಾಳ್ಯ)ದ 35 ವರ್ಷದ ಚಿಕ್ಕಣ್ಣ ಎಂದು ಗುರುತಿಸಲಾಗಿದೆ.

ಜೂ.14 ರಂದು ಮೃತ ಚಿಕ್ಕಣ್ಣ ಬಹಿರ್ದೆಸೆಗೆ ಕೆರೆಯ ಬಳಿ ತೆರಳಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇಂದು ಕೆರೆಯಲ್ಲಿ ಮೃತ ದೇಹ ತೇಲುತ್ತಿರುವುದು ಕಂಡು ಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

10 minutes ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

18 minutes ago

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

10 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

11 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

16 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

17 hours ago