ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ……..
ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ?
ಒಬ್ಬ
” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.”
ಇನ್ನೊಬ್ಬ
” ನಾನು ಐಎಎಸ್ ಪಾಸು ಮಾಡಿ ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ. ”
ಮತ್ತೊಬ್ಬ
” ನಾನು ಡಾಕ್ಟರ್ ಆಗಿ ಹಣವಿಲ್ಲದ ಬಡ ರೋಗಿಗಳಿಗೆ ಚಿಕಿತ್ಸೆ ನೀಡುತ್ತೇನೆ.”
ಮಗದೊಬ್ಬ
” ನಾನು ಸೈನ್ಯ ಸೇರಿ ದೇಶ ರಕ್ಷಣೆ ಮಾಡುತ್ತೇನೆ ”
ಅವನೊಬ್ಬ
” ನಾನು ಪತ್ರಕರ್ತನಾಗಿ ಸಮಾಜದ ಹುಳುಕುಗಳನ್ನು ತೋರಿಸಿ ಪ್ರಜಾಪ್ರಭುತ್ವದ ಕಾವಲುಗಾರನಾಗುತ್ತೇನೆ. ”
ಇವನೊಬ್ಬ
” ನಾನು ಕೃಷಿ ವಿಜ್ಞಾನಿಯಾಗಿ ರೈತರ ಸಂಕಷ್ಟಗಳಿಗೆ ಪರಿಹಾರ ಕಂಡುಹಿಡಿಯುತ್ತೇನೆ ”
ಅಲ್ಲೊಬ್ಬ
” ನಾನು ಸಮಾಜ ಸೇವಕನಾಗಿ ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತೇನೆ.”
ಇಲ್ಲೊಬ್ಬ
” ನಾನು ರಾಜಕಾರಣಿಯಾಗಿ ಪ್ರಾಮಾಣಿಕತೆಯಿಂದ ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ. ”
ಯಾರೋ ಒಬ್ಬ
” ನಾನು ಇಂಜಿನಿಯರ್ ಆಗಿ ಅತ್ಯುತ್ತಮ ಗುಣಮಟ್ಟದ ರಸ್ತೆ ಸೇತುವೆ ನಿರ್ಮಿಸುತ್ತೇನೆ .”
ಕೆಲವರು ಕ್ರೀಡೆ ಸಂಗೀತ ಶಿಕ್ಷಣ ಸಾಹಿತ್ಯ ವ್ಯಾಪಾರ ಉದ್ಯಮ ವಿಜ್ಞಾನ ಹೀಗೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಕನಸು ಕಾಣುತ್ತಾರೆ……
ಅದೃಷ್ಟವಶಾತ್ ಅವರಲ್ಲಿ ಕೆಲವರು ತಾವು ಅಂದು ಆಸೆ ಪಟ್ಟ ಗುರಿ ತಲುಪುತ್ತಾರೆ…….
ಆದರೆ,
ಅವರು ಗುರಿ ತಲುಪಿದ ನಂತರ ತಾವು ಶಾಲೆಯಲ್ಲಿದ್ದಾಗ ಮುಗ್ದತೆಯಿಂದ ಕನಸು ಕಂಡ ಆ ” ಸೇವೆಯನ್ನು ” ನಿಜವಾಗಿಯೂ ಕಾರ್ಯರೂಪಕ್ಕೆ ತರುವರೇ ?
ಆ ವ್ಯವಸ್ಥೆ ನಮ್ಮಲ್ಲಿ ಇದೆಯೇ ?
ನನಗೆ ತಿಳಿದಿರುವಂತೆ ಶೇಕಡಾ 1೦% ಜನ ಆ ಬಾಲ್ಯದ ನೆನಪುಗಳನ್ನು ಹಾಗೇ ಉಳಿಸಿಕೊಂಡು ಸಂಪೂರ್ಣ ಅಲ್ಲದಿದ್ದರೂ ಸಾಧ್ಯವಾದ ಮಟ್ಟಿಗೆ ಜೀವನ ಪೂರ್ತಿ ಅದನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಾರೆ.
ಉಳಿದವರು…….
ಕೆಲವರು,
ಪ್ರಾರಂಭದಲ್ಲಿ ಸ್ವಲ್ಪ ಪ್ರಯತ್ನಿಸಿ ನಂತರ ವ್ಯವಸ್ಥೆಯೊಳಗೆ ಒಬ್ಬರಾಗುತ್ತಾರೆ.
ಇನ್ನೊಬ್ಬರು,
ಕೌಟುಂಬಿಕ – ಸಾಂಸಾರಿಕ ಬಂಧನದಲ್ಲಿ ಸಿಲುಕಿ ಹಳೆಯದನ್ನು ಮರೆಯುತ್ತಾರೆ.
ಮತ್ತೊಬ್ಬರು,
ಹಣ ಅಧಿಕಾರದ ದುರಾಸೆಗೆ ಬಿದ್ದು ಗತಕಾಲದ ದಿನಗಳನ್ನು ಮರೆತು ಭ್ರಷ್ಟರಾಗುತ್ತಾರೆ.
ಹಲವರು,
ರಾಜಕೀಯ – ವಾಣಿಜ್ಯೋದ್ಯಮಿಗಳ ಒತ್ತಡಕ್ಕೆ ಮಣಿದು ಈ ಕೆಟ್ಟ ವ್ಯವಸ್ಥೆಯೊಳಗೆ ಸೇರಿ ಹೋಗುತ್ತಾರೆ.
ಇನ್ನೊಂದಿಷ್ಟು,
ತೋರಿಕೆಗೆ ಒಳ್ಳೆಯವರಂತೆ ನಟಿಸುತ್ತಾ ಒಳಗೊಳಗೆ ಅಪಾರ ಭ್ರಷ್ಟರಾಗಿರುತ್ತಾರೆ.
ಮತ್ತೊಂದಿಷ್ಟು,
ಸ್ವಲ್ಪ ಆ ಕಡೆ ಸ್ವಲ್ಪ ಈ ಕಡೆ ತೊಳಲಾಡುತ್ತಾ ಎರಡನ್ನೂ ಮಾಡಲು ಧೈರ್ಯ ಸಾಲದೆ ಒಳಗೊಳಗೆ ಅಸಹಾಯಕತೆಯಿಂದ ನರಳುತ್ತಾ ಸಾಗುತ್ತಿರುತ್ತಾರೆ.
ಹೀಗೆ ಬಾಲ್ಯದ ಕನಸುಗಳು ಕಮರಿ ಹೋಗುತ್ತಾ ಇಡೀ ವ್ಯವಸ್ಥೆ ವಿನಾಶದ ಅಂಚಿಗೆ ನೂಕಲ್ಪಡುತ್ತಿದೆ.
ನಮ್ಮ ಸೋಷಿಯಲ್ ಸ್ಟ್ರಕ್ಚರ್ ನ ಒಳ್ಳೆಯ ಅಡಿಪಾಯ ವೇದಿಕೆಯ ಮಟ್ಟಕ್ಕೆ ಬರುವ ಹೊತ್ತಿಗೆ ಶಿಥಿಲವಾಗಿರುತ್ತದೆ. ಆ ಶಿಥಿಲ ವೇದಿಕೆಯ ಮೇಲೆ Perform ಮಾಡುವ ಹೊತ್ತಿಗೆ ವ್ಯಕ್ತಿ ಆಸಕ್ತಿಯನ್ನೇ ಕಳೆದುಕೊಂಡು ನಿಸ್ತೇಜಿತನಾಗಿರುತ್ತಾನೆ.
ವೀಕ್ಷಕರು ಪ್ರಾರಂಭದಲ್ಲಿ ಅಪಾರ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ನಂತರ ಕ್ರಮೇಣ ಎಲ್ಲರ ಸಾಮರ್ಥ್ಯವೂ ತೃಪ್ತಿ ತರದೇ ಇದ್ದಾಗ ನಿರಾಸೆಯಿಂದ ವ್ಯವಸ್ಥೆಗೆ ಹೊಂದಿಕೊಳ್ಳತೊಡಗುತ್ತಾರೆ.
ಯಾರಾದರೂ ಅಷ್ಟೆ ಎಂದು ನಿರಾಸಕ್ತರಾಗುತ್ತಾರೆ.
ಬಹುತೇಕ ಭಾರತೀಯ ಸಮಾಜದ ಇಂದಿನ ಸ್ಥಿತಿ ಹೀಗೇ ಆಗಿದೆ.
ಬದಲಾವಣೆ ಅಡಿಪಾಯದಿಂದಲೇ ಪ್ರಾರಂಭವಾಗಬೇಕಿದೆ ಮತ್ತು ಕೊನೆಯವರೆಗೂ ಅದೇ ಗುಣಮಟ್ಟ ಕಾಪಾಡಬೇಕಿದೆ.
ಅದನ್ನು ನಾವೆಲ್ಲರೂ ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವ ದಿನಗಳು ಶೀಘ್ರವಾಗಿ ಬರಲಿ ಎಂದು ಆಶಿಸುತ್ತಾ…..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್.ಕೆ
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…