Categories: ಲೇಖನ

ಕಾಣೆಯಾಗುವ ಬಾಲ್ಯದ ಆದರ್ಶಗಳು……

ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ……..

ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ?

ಒಬ್ಬ
” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.”

ಇನ್ನೊಬ್ಬ
” ನಾನು ಐಎಎಸ್‌ ಪಾಸು ಮಾಡಿ ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ. ”

ಮತ್ತೊಬ್ಬ
” ನಾನು ಡಾಕ್ಟರ್ ಆಗಿ ಹಣವಿಲ್ಲದ ಬಡ ರೋಗಿಗಳಿಗೆ ಚಿಕಿತ್ಸೆ ನೀಡುತ್ತೇನೆ.”

ಮಗದೊಬ್ಬ
” ನಾನು ಸೈನ್ಯ ಸೇರಿ ದೇಶ ರಕ್ಷಣೆ ಮಾಡುತ್ತೇನೆ ”

ಅವನೊಬ್ಬ
” ನಾನು ಪತ್ರಕರ್ತನಾಗಿ ಸಮಾಜದ ಹುಳುಕುಗಳನ್ನು ತೋರಿಸಿ ಪ್ರಜಾಪ್ರಭುತ್ವದ ಕಾವಲುಗಾರನಾಗುತ್ತೇನೆ. ”

ಇವನೊಬ್ಬ
” ನಾನು ಕೃಷಿ ವಿಜ್ಞಾನಿಯಾಗಿ ರೈತರ ಸಂಕಷ್ಟಗಳಿಗೆ ಪರಿಹಾರ ಕಂಡುಹಿಡಿಯುತ್ತೇನೆ ”

ಅಲ್ಲೊಬ್ಬ
” ನಾನು ಸಮಾಜ ಸೇವಕನಾಗಿ ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತೇನೆ.”

ಇಲ್ಲೊಬ್ಬ
” ನಾನು ರಾಜಕಾರಣಿಯಾಗಿ ಪ್ರಾಮಾಣಿಕತೆಯಿಂದ ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ. ”

ಯಾರೋ ಒಬ್ಬ
” ನಾನು ಇಂಜಿನಿಯರ್ ಆಗಿ ಅತ್ಯುತ್ತಮ ಗುಣಮಟ್ಟದ ರಸ್ತೆ ಸೇತುವೆ ನಿರ್ಮಿಸುತ್ತೇನೆ .”

ಕೆಲವರು ಕ್ರೀಡೆ ಸಂಗೀತ ಶಿಕ್ಷಣ ಸಾಹಿತ್ಯ ವ್ಯಾಪಾರ ಉದ್ಯಮ ವಿಜ್ಞಾನ ಹೀಗೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಕನಸು ಕಾಣುತ್ತಾರೆ……

ಅದೃಷ್ಟವಶಾತ್ ಅವರಲ್ಲಿ ಕೆಲವರು ತಾವು ಅಂದು ಆಸೆ ಪಟ್ಟ ಗುರಿ ತಲುಪುತ್ತಾರೆ…….

ಆದರೆ,
ಅವರು ಗುರಿ ತಲುಪಿದ ನಂತರ ತಾವು ಶಾಲೆಯಲ್ಲಿದ್ದಾಗ ಮುಗ್ದತೆಯಿಂದ ಕನಸು ಕಂಡ ಆ ” ಸೇವೆಯನ್ನು ” ನಿಜವಾಗಿಯೂ ಕಾರ್ಯರೂಪಕ್ಕೆ ತರುವರೇ ?
ಆ ವ್ಯವಸ್ಥೆ ನಮ್ಮಲ್ಲಿ ಇದೆಯೇ ?

ನನಗೆ ತಿಳಿದಿರುವಂತೆ ಶೇಕಡಾ 1೦% ಜನ ಆ ಬಾಲ್ಯದ ನೆನಪುಗಳನ್ನು ಹಾಗೇ ಉಳಿಸಿಕೊಂಡು ಸಂಪೂರ್ಣ ಅಲ್ಲದಿದ್ದರೂ ಸಾಧ್ಯವಾದ ಮಟ್ಟಿಗೆ ಜೀವನ ಪೂರ್ತಿ ಅದನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಾರೆ.

ಉಳಿದವರು…….

ಕೆಲವರು,
ಪ್ರಾರಂಭದಲ್ಲಿ ಸ್ವಲ್ಪ ಪ್ರಯತ್ನಿಸಿ ನಂತರ ವ್ಯವಸ್ಥೆಯೊಳಗೆ ಒಬ್ಬರಾಗುತ್ತಾರೆ.

ಇನ್ನೊಬ್ಬರು,
ಕೌಟುಂಬಿಕ – ಸಾಂಸಾರಿಕ ಬಂಧನದಲ್ಲಿ ಸಿಲುಕಿ ಹಳೆಯದನ್ನು ಮರೆಯುತ್ತಾರೆ.

ಮತ್ತೊಬ್ಬರು,
ಹಣ ಅಧಿಕಾರದ ದುರಾಸೆಗೆ ಬಿದ್ದು ಗತಕಾಲದ ದಿನಗಳನ್ನು ಮರೆತು ಭ್ರಷ್ಟರಾಗುತ್ತಾರೆ.

ಹಲವರು,
ರಾಜಕೀಯ – ವಾಣಿಜ್ಯೋದ್ಯಮಿಗಳ ಒತ್ತಡಕ್ಕೆ ಮಣಿದು ಈ ಕೆಟ್ಟ ವ್ಯವಸ್ಥೆಯೊಳಗೆ ಸೇರಿ ಹೋಗುತ್ತಾರೆ.

ಇನ್ನೊಂದಿಷ್ಟು,
ತೋರಿಕೆಗೆ ಒಳ್ಳೆಯವರಂತೆ ನಟಿಸುತ್ತಾ ಒಳಗೊಳಗೆ ಅಪಾರ ಭ್ರಷ್ಟರಾಗಿರುತ್ತಾರೆ.

ಮತ್ತೊಂದಿಷ್ಟು,
ಸ್ವಲ್ಪ ಆ ಕಡೆ ಸ್ವಲ್ಪ ಈ ಕಡೆ ತೊಳಲಾಡುತ್ತಾ ಎರಡನ್ನೂ ಮಾಡಲು ಧೈರ್ಯ ಸಾಲದೆ ಒಳಗೊಳಗೆ ಅಸಹಾಯಕತೆಯಿಂದ ನರಳುತ್ತಾ ಸಾಗುತ್ತಿರುತ್ತಾರೆ.

ಹೀಗೆ ಬಾಲ್ಯದ ಕನಸುಗಳು ಕಮರಿ ಹೋಗುತ್ತಾ ಇಡೀ ವ್ಯವಸ್ಥೆ ವಿನಾಶದ ಅಂಚಿಗೆ ನೂಕಲ್ಪಡುತ್ತಿದೆ.

ನಮ್ಮ ಸೋಷಿಯಲ್ ಸ್ಟ್ರಕ್ಚರ್ ನ ಒಳ್ಳೆಯ ಅಡಿಪಾಯ ವೇದಿಕೆಯ ಮಟ್ಟಕ್ಕೆ ಬರುವ ಹೊತ್ತಿಗೆ ಶಿಥಿಲವಾಗಿರುತ್ತದೆ. ಆ ಶಿಥಿಲ ವೇದಿಕೆಯ ಮೇಲೆ Perform ಮಾಡುವ ಹೊತ್ತಿಗೆ ವ್ಯಕ್ತಿ ಆಸಕ್ತಿಯನ್ನೇ ಕಳೆದುಕೊಂಡು ನಿಸ್ತೇಜಿತನಾಗಿರುತ್ತಾನೆ.

ವೀಕ್ಷಕರು ಪ್ರಾರಂಭದಲ್ಲಿ ಅಪಾರ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ನಂತರ ಕ್ರಮೇಣ ಎಲ್ಲರ ಸಾಮರ್ಥ್ಯವೂ ತೃಪ್ತಿ ತರದೇ ಇದ್ದಾಗ ನಿರಾಸೆಯಿಂದ ವ್ಯವಸ್ಥೆಗೆ ಹೊಂದಿಕೊಳ್ಳತೊಡಗುತ್ತಾರೆ.
ಯಾರಾದರೂ ಅಷ್ಟೆ ಎಂದು ನಿರಾಸಕ್ತರಾಗುತ್ತಾರೆ.

ಬಹುತೇಕ ಭಾರತೀಯ ಸಮಾಜದ ಇಂದಿನ ಸ್ಥಿತಿ ಹೀಗೇ ಆಗಿದೆ.

ಬದಲಾವಣೆ ಅಡಿಪಾಯದಿಂದಲೇ ಪ್ರಾರಂಭವಾಗಬೇಕಿದೆ ಮತ್ತು ಕೊನೆಯವರೆಗೂ ಅದೇ ಗುಣಮಟ್ಟ ಕಾಪಾಡಬೇಕಿದೆ.

ಅದನ್ನು ನಾವೆಲ್ಲರೂ ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವ ದಿನಗಳು ಶೀಘ್ರವಾಗಿ ಬರಲಿ ಎಂದು ಆಶಿಸುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

10 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago