ಕಾನೂನು ತೊಡಕು- ಬಿ.ಸಿ.ಆನಂದ್ ಗೆ ಮತ ಹಾಕಿದರೆ ವ್ಯರ್ಥ- ದಿ.ಎಚ್ ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಗೆಲ್ಲಿಸಿ- ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ

ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದ ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಜೆಡಿಎಸ್ ಪಕ್ಷದಿಂದ ಹುಸ್ಕೂರ್ ಆನಂದ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಕ್ರಮ ಸಂಖ್ಯೆ. 2, ಗುರುತು, ಹಣ್ಣಿನ‌ ಬುಟ್ಟಿ ಗುರುತು. ದಿ.ಎಚ್.ಅಪ್ಪಯ್ಯಣ್ಣನವರಿಗೆ ಆತ್ಮಕ್ಕೆ ಶಾಂತಿ ಹಾಗೂ ನ್ಯಾಯ ಒದಗಿಸಲು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹೇಳಿದರು.

ಕೆಲವರು ಜೆಡಿಎಸ್ ದೊಡ್ಡಬಳ್ಳಾಪುರದಲ್ಲಿ‌ ಇಲ್ಲ ಎಂದು ಮೂದಲಿಸಿದ್ದಾರೆ. ಬಮೂಲ್ ಚುನಾವಣೆಗೆ ಜೆಡಿಎಸ್ ನಿಂದ ಸೂಕ್ತ ಅಭ್ಯರ್ಥಿ ಯಾರೂ ಇಲ್ಲ ಎಂದು ಹೇಳಿದ್ದಾರೆ.. ಅದಕ್ಕೆ ನಾವು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ. ನೂರಕ್ಕೆ ನೂರರಷ್ಟು ಜೆಡಿಎಸ್ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ ಎಂದರು.

ಬಿಜೆಪಿಯವರು ಹುಸ್ಕೂರ್ ಆನಂದ್ ಅವರಿಗೆ ವಿಪರೀತ ತೊಂದರೆ ಕೊಟ್ಟಿದ್ದಾರೆ… ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಅವರಿಗೆ ವೋಟ್ ಮಾಡಿ ನಿರಾಸೆ ಮಾಡಿಕೊಳ್ಳಬೇಡಿ, ನಿಮ್ಮ ವೋಟ್ ನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದರು.

ದೊಡ್ಡಬಳ್ಳಾಪುರ ತಾಲೂಕು ಯಾವುದೇ ಚುನಾವಣೆ ಬಂದರೂ ವಿಶೇಷ ಪಾತ್ರ ವಹಿಸುತ್ತದೆ. ಈ ಹಿಂದೆ ಬಮೂಲ್ ಚುನಾವಣೆಯಲ್ಲಿ ದಿ.ಅಪ್ಪಯ್ಯಣ್ಣನವರು ನೋವು ಅನುಭವಿಸಿದ್ದರು. ಆ ನೋವಿನಿಂದ ಹೊರ ಬರಲು ಒಮ್ಮತವಾಗಿ ಹುಸ್ಕೂರ್ ಆನಂದ್ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು‌ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ಹುಸ್ಕೂರ್ ಆನಂದ್ ಸ್ಪರ್ಧೆ ಮಾಡುವುದಕ್ಕೆ ಯಾರೆಲ್ಲಾ ತೊಂದರೆ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ… ವೋಟ್ ಮಾಡುವವರು ರೈತಾಪಿ ವರ್ಗ. ಅವರ ಶಕ್ತಿ ತುಂಬುವ ಕಾರ್ಯ ಮಾಡುತ್ತೇವೆ. ಇನ್ನೂ ಕೇವಲ 96 ಗಂಟೆ ಬಾಕಿ ಇದೆ. ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ ಎಂದರು.

ಕಾಂಗ್ರೆಸ್ ಮುಖಂಡರು ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ಕುರಿತು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಮಾತನಾಡಿ, ಕೆಲವರು ಬೇಕಂತಲೇ ನನ್ನ ಮೇಲೆ 8 ಕೇಸ್ ಹಾಕಿ ಕಿರುಕುಳ ಮಾಡಿದ್ದಾರೆ… ಸ್ಪರ್ಧೆ ಮಾಡಲು ಕೋರ್ಟ್ ನಿಂದ ಆದೇಶ ತಂದಿದ್ದೇನೆ.  ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡರು, ಮುಖಂಡರು, ಕಾರ್ಯಕರ್ತರು ನೀವೇ ಸೂಕ್ತ ಹಾಗೂ ಉತ್ತಮ‌ ಅಭ್ಯರ್ಥಿ ಎಂದು ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಗೆಲುವಿಗೆ ಎಲ್ಲರು‌ ಸಹಕರಿಸಬೇಕು. ಅಧಿಕಾರಕ್ಕೆಬಂದ ಮೇಲೆ‌ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲು ಯೋಜನೆ ನಿರೂಪಿಸಿದ್ದೇನೆ ಎಂದರು.

ಈ ವೇಳೆ ಎ.ನರಸಿಂಹಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ನಗರ ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ, ಬೆಂ.ಗ್ರಾ ಮಹಿಳಾ ವಕ್ತಾರೆ ಶಶಿಕಲಾ, ಹೋಬಳಿ ಅಧ್ಯಕ್ಷರಾದ ಜಗನ್ನಾಥ ಚಾರಿ, ರಂಗಸ್ವಾಮಿ, ಸತೀಶ್, ಸಿದ್ದಪ್ಪ, ರಾಜಗೋಪಾಲ್, ಜಗದೀಶ, ಅಶ್ವತ್ಥನಾರಾಯಣ್  ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

59 minutes ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

12 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

17 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

17 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

1 day ago