ಕಾನೂನು ತೊಡಕು- ಬಿ.ಸಿ.ಆನಂದ್ ಗೆ ಮತ ಹಾಕಿದರೆ ವ್ಯರ್ಥ- ದಿ.ಎಚ್ ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಗೆಲ್ಲಿಸಿ- ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ

ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದ ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಜೆಡಿಎಸ್ ಪಕ್ಷದಿಂದ ಹುಸ್ಕೂರ್ ಆನಂದ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಕ್ರಮ ಸಂಖ್ಯೆ. 2, ಗುರುತು, ಹಣ್ಣಿನ‌ ಬುಟ್ಟಿ ಗುರುತು. ದಿ.ಎಚ್.ಅಪ್ಪಯ್ಯಣ್ಣನವರಿಗೆ ಆತ್ಮಕ್ಕೆ ಶಾಂತಿ ಹಾಗೂ ನ್ಯಾಯ ಒದಗಿಸಲು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹೇಳಿದರು.

ಕೆಲವರು ಜೆಡಿಎಸ್ ದೊಡ್ಡಬಳ್ಳಾಪುರದಲ್ಲಿ‌ ಇಲ್ಲ ಎಂದು ಮೂದಲಿಸಿದ್ದಾರೆ. ಬಮೂಲ್ ಚುನಾವಣೆಗೆ ಜೆಡಿಎಸ್ ನಿಂದ ಸೂಕ್ತ ಅಭ್ಯರ್ಥಿ ಯಾರೂ ಇಲ್ಲ ಎಂದು ಹೇಳಿದ್ದಾರೆ.. ಅದಕ್ಕೆ ನಾವು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ. ನೂರಕ್ಕೆ ನೂರರಷ್ಟು ಜೆಡಿಎಸ್ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ ಎಂದರು.

ಬಿಜೆಪಿಯವರು ಹುಸ್ಕೂರ್ ಆನಂದ್ ಅವರಿಗೆ ವಿಪರೀತ ತೊಂದರೆ ಕೊಟ್ಟಿದ್ದಾರೆ… ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಅವರಿಗೆ ವೋಟ್ ಮಾಡಿ ನಿರಾಸೆ ಮಾಡಿಕೊಳ್ಳಬೇಡಿ, ನಿಮ್ಮ ವೋಟ್ ನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದರು.

ದೊಡ್ಡಬಳ್ಳಾಪುರ ತಾಲೂಕು ಯಾವುದೇ ಚುನಾವಣೆ ಬಂದರೂ ವಿಶೇಷ ಪಾತ್ರ ವಹಿಸುತ್ತದೆ. ಈ ಹಿಂದೆ ಬಮೂಲ್ ಚುನಾವಣೆಯಲ್ಲಿ ದಿ.ಅಪ್ಪಯ್ಯಣ್ಣನವರು ನೋವು ಅನುಭವಿಸಿದ್ದರು. ಆ ನೋವಿನಿಂದ ಹೊರ ಬರಲು ಒಮ್ಮತವಾಗಿ ಹುಸ್ಕೂರ್ ಆನಂದ್ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು‌ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ಹುಸ್ಕೂರ್ ಆನಂದ್ ಸ್ಪರ್ಧೆ ಮಾಡುವುದಕ್ಕೆ ಯಾರೆಲ್ಲಾ ತೊಂದರೆ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ… ವೋಟ್ ಮಾಡುವವರು ರೈತಾಪಿ ವರ್ಗ. ಅವರ ಶಕ್ತಿ ತುಂಬುವ ಕಾರ್ಯ ಮಾಡುತ್ತೇವೆ. ಇನ್ನೂ ಕೇವಲ 96 ಗಂಟೆ ಬಾಕಿ ಇದೆ. ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ ಎಂದರು.

ಕಾಂಗ್ರೆಸ್ ಮುಖಂಡರು ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ಕುರಿತು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಮಾತನಾಡಿ, ಕೆಲವರು ಬೇಕಂತಲೇ ನನ್ನ ಮೇಲೆ 8 ಕೇಸ್ ಹಾಕಿ ಕಿರುಕುಳ ಮಾಡಿದ್ದಾರೆ… ಸ್ಪರ್ಧೆ ಮಾಡಲು ಕೋರ್ಟ್ ನಿಂದ ಆದೇಶ ತಂದಿದ್ದೇನೆ.  ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡರು, ಮುಖಂಡರು, ಕಾರ್ಯಕರ್ತರು ನೀವೇ ಸೂಕ್ತ ಹಾಗೂ ಉತ್ತಮ‌ ಅಭ್ಯರ್ಥಿ ಎಂದು ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಗೆಲುವಿಗೆ ಎಲ್ಲರು‌ ಸಹಕರಿಸಬೇಕು. ಅಧಿಕಾರಕ್ಕೆಬಂದ ಮೇಲೆ‌ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲು ಯೋಜನೆ ನಿರೂಪಿಸಿದ್ದೇನೆ ಎಂದರು.

ಈ ವೇಳೆ ಎ.ನರಸಿಂಹಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ನಗರ ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ, ಬೆಂ.ಗ್ರಾ ಮಹಿಳಾ ವಕ್ತಾರೆ ಶಶಿಕಲಾ, ಹೋಬಳಿ ಅಧ್ಯಕ್ಷರಾದ ಜಗನ್ನಾಥ ಚಾರಿ, ರಂಗಸ್ವಾಮಿ, ಸತೀಶ್, ಸಿದ್ದಪ್ಪ, ರಾಜಗೋಪಾಲ್, ಜಗದೀಶ, ಅಶ್ವತ್ಥನಾರಾಯಣ್  ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

4 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

10 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

10 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

14 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

15 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago