ಕಾನೂನು ತೊಡಕು- ಬಿ.ಸಿ.ಆನಂದ್ ಗೆ ಮತ ಹಾಕಿದರೆ ವ್ಯರ್ಥ- ದಿ.ಎಚ್ ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಗೆಲ್ಲಿಸಿ- ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ

ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದ ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಜೆಡಿಎಸ್ ಪಕ್ಷದಿಂದ ಹುಸ್ಕೂರ್ ಆನಂದ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಕ್ರಮ ಸಂಖ್ಯೆ. 2, ಗುರುತು, ಹಣ್ಣಿನ‌ ಬುಟ್ಟಿ ಗುರುತು. ದಿ.ಎಚ್.ಅಪ್ಪಯ್ಯಣ್ಣನವರಿಗೆ ಆತ್ಮಕ್ಕೆ ಶಾಂತಿ ಹಾಗೂ ನ್ಯಾಯ ಒದಗಿಸಲು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹೇಳಿದರು.

ಕೆಲವರು ಜೆಡಿಎಸ್ ದೊಡ್ಡಬಳ್ಳಾಪುರದಲ್ಲಿ‌ ಇಲ್ಲ ಎಂದು ಮೂದಲಿಸಿದ್ದಾರೆ. ಬಮೂಲ್ ಚುನಾವಣೆಗೆ ಜೆಡಿಎಸ್ ನಿಂದ ಸೂಕ್ತ ಅಭ್ಯರ್ಥಿ ಯಾರೂ ಇಲ್ಲ ಎಂದು ಹೇಳಿದ್ದಾರೆ.. ಅದಕ್ಕೆ ನಾವು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ. ನೂರಕ್ಕೆ ನೂರರಷ್ಟು ಜೆಡಿಎಸ್ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ ಎಂದರು.

ಬಿಜೆಪಿಯವರು ಹುಸ್ಕೂರ್ ಆನಂದ್ ಅವರಿಗೆ ವಿಪರೀತ ತೊಂದರೆ ಕೊಟ್ಟಿದ್ದಾರೆ… ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಅವರಿಗೆ ವೋಟ್ ಮಾಡಿ ನಿರಾಸೆ ಮಾಡಿಕೊಳ್ಳಬೇಡಿ, ನಿಮ್ಮ ವೋಟ್ ನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದರು.

ದೊಡ್ಡಬಳ್ಳಾಪುರ ತಾಲೂಕು ಯಾವುದೇ ಚುನಾವಣೆ ಬಂದರೂ ವಿಶೇಷ ಪಾತ್ರ ವಹಿಸುತ್ತದೆ. ಈ ಹಿಂದೆ ಬಮೂಲ್ ಚುನಾವಣೆಯಲ್ಲಿ ದಿ.ಅಪ್ಪಯ್ಯಣ್ಣನವರು ನೋವು ಅನುಭವಿಸಿದ್ದರು. ಆ ನೋವಿನಿಂದ ಹೊರ ಬರಲು ಒಮ್ಮತವಾಗಿ ಹುಸ್ಕೂರ್ ಆನಂದ್ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು‌ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ಹುಸ್ಕೂರ್ ಆನಂದ್ ಸ್ಪರ್ಧೆ ಮಾಡುವುದಕ್ಕೆ ಯಾರೆಲ್ಲಾ ತೊಂದರೆ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ… ವೋಟ್ ಮಾಡುವವರು ರೈತಾಪಿ ವರ್ಗ. ಅವರ ಶಕ್ತಿ ತುಂಬುವ ಕಾರ್ಯ ಮಾಡುತ್ತೇವೆ. ಇನ್ನೂ ಕೇವಲ 96 ಗಂಟೆ ಬಾಕಿ ಇದೆ. ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ ಎಂದರು.

ಕಾಂಗ್ರೆಸ್ ಮುಖಂಡರು ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ಕುರಿತು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಮಾತನಾಡಿ, ಕೆಲವರು ಬೇಕಂತಲೇ ನನ್ನ ಮೇಲೆ 8 ಕೇಸ್ ಹಾಕಿ ಕಿರುಕುಳ ಮಾಡಿದ್ದಾರೆ… ಸ್ಪರ್ಧೆ ಮಾಡಲು ಕೋರ್ಟ್ ನಿಂದ ಆದೇಶ ತಂದಿದ್ದೇನೆ.  ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡರು, ಮುಖಂಡರು, ಕಾರ್ಯಕರ್ತರು ನೀವೇ ಸೂಕ್ತ ಹಾಗೂ ಉತ್ತಮ‌ ಅಭ್ಯರ್ಥಿ ಎಂದು ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಗೆಲುವಿಗೆ ಎಲ್ಲರು‌ ಸಹಕರಿಸಬೇಕು. ಅಧಿಕಾರಕ್ಕೆಬಂದ ಮೇಲೆ‌ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲು ಯೋಜನೆ ನಿರೂಪಿಸಿದ್ದೇನೆ ಎಂದರು.

ಈ ವೇಳೆ ಎ.ನರಸಿಂಹಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ನಗರ ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ, ಬೆಂ.ಗ್ರಾ ಮಹಿಳಾ ವಕ್ತಾರೆ ಶಶಿಕಲಾ, ಹೋಬಳಿ ಅಧ್ಯಕ್ಷರಾದ ಜಗನ್ನಾಥ ಚಾರಿ, ರಂಗಸ್ವಾಮಿ, ಸತೀಶ್, ಸಿದ್ದಪ್ಪ, ರಾಜಗೋಪಾಲ್, ಜಗದೀಶ, ಅಶ್ವತ್ಥನಾರಾಯಣ್  ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

6 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

16 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

17 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

21 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

1 day ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

1 day ago