ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ- ಸಿಎಂ‌ ಸಿದ್ದರಾಮಯ್ಯ

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಮಾತ್ರ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರದೆ ಮುಂದಿನ‌ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಸಿಸಿಬಿ ಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.

ಈ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್‌ ಮೋಹನ್ ಸೇರಿದಂತೆ ಇತರರು ಭಾಗಿಯಾಗಿದ್ದರು.

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

44 minutes ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

8 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

16 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

17 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago