ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಮ್ಮ ಸರ್ಕಾರ ಕೇವಲ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಮಾತ್ರ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.
ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರದೆ ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.
ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.
ಈ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೇರಿದಂತೆ ಇತರರು ಭಾಗಿಯಾಗಿದ್ದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…