ಕಾನೂನು ಬಾಹಿರ ಜಮೀನು ಮಂಜೂರಾತಿ ಆಗಿರುವುದನ್ನು ವಜಾ ಮಾಡಬೇಕು- ಕೆರೆ ಒತ್ತುವರಿ ತೆರವು-ಅಕ್ರಮ ಮದ್ಯ ಮಾರಾಟ ನಿಷೇಧ ಮಾಡಬೇಕು- ಯು.ಮುನಿರಾಜು ಒತ್ತಾಯ

ಕಾನೂನು ಬಾಹಿರವಾಗಿ ಜಮೀನು ಮಂಜೂರಾತಿ ಆಗಿರುವುದನ್ನ ವಜಾ ಮಾಡಬೇಕು, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಮಾಡ ಬೇಕು, ಅರೇಹಳ್ಳಿ ಗುಡ್ಡದಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡ ಬೇಕು ಮತ್ತು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಯು.ಮುನಿರಾಜು ಒತ್ತಾಯಿಸಿ ಧರಣಿ ಸತ್ಯಾಗ್ರಹವನ್ನ ನಡೆಸಿದರು.

ಸರ್ಕಾರಿ ಜಾಗ ಮತ್ತು ಕೆರೆಯನ್ನ ಭೂಗಳ್ಳರಿಂದ ರಕ್ಷಣೆ ಮಾಡುವಂತೆ ಒತ್ತಾಯಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನ ಮಾಡಿದರು.

ಸರ್ಕಾರಿ ಜಾಗವನ್ನ ಅಧಿಕಾರಿಗಳು ಉಳಿಸದಿದ್ದಾರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದರು.

ಪ್ರತಿಭಟನೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ಅರೇಹಳ್ಳಿ ಗುಡ್ಡದಹಳ್ಳಿಯ ಸರ್ವೆ ನಂಬರ್ 57ರ 6 ಎಕರೆ ಜಮೀನನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದೆ, ದಾಖಲೆಗಳನ್ನ ಪರಿಶೀಲಿಸಿ ಮಂಜೂರಾತಿಯನ್ನ ವಜಾ ಮಾಡಬೇಕು, ಪಾಲನಜೋಗಹಳ್ಳಿಯ ಸರ್ವೆ ನಂಬರ್ 63 ಮತ್ತು23ರಲ್ಲಿರುವ ಕೆರೆಯನ್ನ ಒತ್ತುವರಿ ಮಾಡಿ ಲೇಔಟ್ ಸಂಪರ್ಕಕ್ಕಾಗಿ ರಸ್ತೆ ನಿರ್ಮಾಣ ಮಾಡಲಾಗಿದೆ. ಬಫರ್‌ಝೂನ್‌ನಲ್ಲಿ ಲೇಔಟ್ ನಿರ್ಮಾಣ ಮಾಡಿ ನಿವೇಶನಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ ಎಂದರು.
ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿಯ ಕೆರೆಗಳನ್ನ ಒತ್ತುವರಿ ಮಾಡಲಾಗಿದೆ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ದಾಖಲೆಗಳನ್ನ ಪರಿಶೀಲನೆ ಮಾಡಿ ಕೆರೆಯ ಗಡಿಯನ್ನ ಗುರುತಿಸಿ ಒತ್ತುವರಿಯನ್ನ ತೆರವು ಮಾಡಬೇಕು. ಅರೇಹಳ್ಳಿ ಗುಡ್ಡದಹಳ್ಳಿಯ ಸರ್ವೆ ನಂಬರ್ 86ರ 2-16 ಎಕರೆ ಜಾಗದಲ್ಲಿ ಬಡವರು ಗುಡಿಸಲುಗಳನ್ನ ಹಾಕಿಕೊಂಡು ಕಳೆದ 40 ವರ್ಷದದಿಂದ ವಾಸ ಮಾಡುತ್ತಿದ್ದಾರೆ, ಅವರಿಗೆ ಹಕ್ಕುಪತ್ರಗಳು ಮತ್ತು ಪಂಚಾಯಿತಿಯಿಂದ ಫಾರಂ ನಂ 9 ಮತ್ತು 11 ನೀಡುವಂತೆ ಒತ್ತಾಯಿಸಿದರು
ತಾಲೂಕಿನ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಸಿಎಲ್-7 ಬಾರ್ ಅಂಡ್ ರೆಸ್ಟೋರೆಂಟ್ ಗಳು ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ, ಇದರಿಂದ ಯುವಕರು ಮದ್ಯ ವ್ಯವಸನಕ್ಕೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ, ಬಾರ್ ಗಳಿಗೆ ಲೇಸೆನ್ಸ್ ನೀಡಬಾರದೆಂದ್ದು ಒತ್ತಾಯಿಸದರು, ಪ್ರತಿಭಟನಾ ಸ್ಥಳಕ್ಕೆ ಬಂದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಅಬಕಾರಿ ಇನ್ಸ್ ಪೇಕ್ಟರ್ ರಾಘವೆಂದ್ರ ಮನವಿ ಸ್ವೀಕರಿಸಿ ಕ್ರಮ ತೆಗೆದುಕೊಳ್ಳುವ ಭರವಸೆಯನ್ನ ನೀಡಿದರು.
ಪ್ರತಿಭಟನೆಯಲ್ಲಿ ವಕೀಲರಾದ ಪುಟ್ಟೇಗೌಡ, ಗೌರವ ಅಧ್ಯಕ್ಷರಾದ ವಿ.ನಾಗರಾಜು, ಜಿಲ್ಲಾಧ್ಯಕ್ಷರಾದ ಎ.ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಮುನಿರಾಜು, ಜಿಲ್ಲಾ ಉಪಾಧ್ಯಕ್ಷರಾದ ನಾಗರಾಜು.ವೈ.ಸಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಪ್ಪಯ್ಯಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಸಂಚಾಲಕರಾದ ರವಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ವೆಂಕಟರಮಣಪ್ಪ, ತಾಲೂಕು ಉಪಾಧ್ಯಕ್ಷರಾದ ರಾಮಕೃಷ್ಣ, ಹೋಬಳಿ ಅಧ್ಯಕ್ಷ ನರಸಿಂಹಮೂರ್ತಿ, ರಾಜ್ಯ ಕಾರ್ಯದರ್ಶಿ ಮುನಿರಾಜು ಇದ್ದರು.
Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

10 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago