ಕಾನೂನು ಬಾಹಿರ ಜಮೀನು ಮಂಜೂರಾತಿ ಆಗಿರುವುದನ್ನು ವಜಾ ಮಾಡಬೇಕು- ಕೆರೆ ಒತ್ತುವರಿ ತೆರವು-ಅಕ್ರಮ ಮದ್ಯ ಮಾರಾಟ ನಿಷೇಧ ಮಾಡಬೇಕು- ಯು.ಮುನಿರಾಜು ಒತ್ತಾಯ

ಕಾನೂನು ಬಾಹಿರವಾಗಿ ಜಮೀನು ಮಂಜೂರಾತಿ ಆಗಿರುವುದನ್ನ ವಜಾ ಮಾಡಬೇಕು, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಮಾಡ ಬೇಕು, ಅರೇಹಳ್ಳಿ ಗುಡ್ಡದಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡ ಬೇಕು ಮತ್ತು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಯು.ಮುನಿರಾಜು ಒತ್ತಾಯಿಸಿ ಧರಣಿ ಸತ್ಯಾಗ್ರಹವನ್ನ ನಡೆಸಿದರು.

ಸರ್ಕಾರಿ ಜಾಗ ಮತ್ತು ಕೆರೆಯನ್ನ ಭೂಗಳ್ಳರಿಂದ ರಕ್ಷಣೆ ಮಾಡುವಂತೆ ಒತ್ತಾಯಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನ ಮಾಡಿದರು.

ಸರ್ಕಾರಿ ಜಾಗವನ್ನ ಅಧಿಕಾರಿಗಳು ಉಳಿಸದಿದ್ದಾರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದರು.

ಪ್ರತಿಭಟನೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ಅರೇಹಳ್ಳಿ ಗುಡ್ಡದಹಳ್ಳಿಯ ಸರ್ವೆ ನಂಬರ್ 57ರ 6 ಎಕರೆ ಜಮೀನನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದೆ, ದಾಖಲೆಗಳನ್ನ ಪರಿಶೀಲಿಸಿ ಮಂಜೂರಾತಿಯನ್ನ ವಜಾ ಮಾಡಬೇಕು, ಪಾಲನಜೋಗಹಳ್ಳಿಯ ಸರ್ವೆ ನಂಬರ್ 63 ಮತ್ತು23ರಲ್ಲಿರುವ ಕೆರೆಯನ್ನ ಒತ್ತುವರಿ ಮಾಡಿ ಲೇಔಟ್ ಸಂಪರ್ಕಕ್ಕಾಗಿ ರಸ್ತೆ ನಿರ್ಮಾಣ ಮಾಡಲಾಗಿದೆ. ಬಫರ್‌ಝೂನ್‌ನಲ್ಲಿ ಲೇಔಟ್ ನಿರ್ಮಾಣ ಮಾಡಿ ನಿವೇಶನಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ ಎಂದರು.
ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿಯ ಕೆರೆಗಳನ್ನ ಒತ್ತುವರಿ ಮಾಡಲಾಗಿದೆ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ದಾಖಲೆಗಳನ್ನ ಪರಿಶೀಲನೆ ಮಾಡಿ ಕೆರೆಯ ಗಡಿಯನ್ನ ಗುರುತಿಸಿ ಒತ್ತುವರಿಯನ್ನ ತೆರವು ಮಾಡಬೇಕು. ಅರೇಹಳ್ಳಿ ಗುಡ್ಡದಹಳ್ಳಿಯ ಸರ್ವೆ ನಂಬರ್ 86ರ 2-16 ಎಕರೆ ಜಾಗದಲ್ಲಿ ಬಡವರು ಗುಡಿಸಲುಗಳನ್ನ ಹಾಕಿಕೊಂಡು ಕಳೆದ 40 ವರ್ಷದದಿಂದ ವಾಸ ಮಾಡುತ್ತಿದ್ದಾರೆ, ಅವರಿಗೆ ಹಕ್ಕುಪತ್ರಗಳು ಮತ್ತು ಪಂಚಾಯಿತಿಯಿಂದ ಫಾರಂ ನಂ 9 ಮತ್ತು 11 ನೀಡುವಂತೆ ಒತ್ತಾಯಿಸಿದರು
ತಾಲೂಕಿನ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಸಿಎಲ್-7 ಬಾರ್ ಅಂಡ್ ರೆಸ್ಟೋರೆಂಟ್ ಗಳು ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ, ಇದರಿಂದ ಯುವಕರು ಮದ್ಯ ವ್ಯವಸನಕ್ಕೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ, ಬಾರ್ ಗಳಿಗೆ ಲೇಸೆನ್ಸ್ ನೀಡಬಾರದೆಂದ್ದು ಒತ್ತಾಯಿಸದರು, ಪ್ರತಿಭಟನಾ ಸ್ಥಳಕ್ಕೆ ಬಂದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಅಬಕಾರಿ ಇನ್ಸ್ ಪೇಕ್ಟರ್ ರಾಘವೆಂದ್ರ ಮನವಿ ಸ್ವೀಕರಿಸಿ ಕ್ರಮ ತೆಗೆದುಕೊಳ್ಳುವ ಭರವಸೆಯನ್ನ ನೀಡಿದರು.
ಪ್ರತಿಭಟನೆಯಲ್ಲಿ ವಕೀಲರಾದ ಪುಟ್ಟೇಗೌಡ, ಗೌರವ ಅಧ್ಯಕ್ಷರಾದ ವಿ.ನಾಗರಾಜು, ಜಿಲ್ಲಾಧ್ಯಕ್ಷರಾದ ಎ.ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಮುನಿರಾಜು, ಜಿಲ್ಲಾ ಉಪಾಧ್ಯಕ್ಷರಾದ ನಾಗರಾಜು.ವೈ.ಸಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಪ್ಪಯ್ಯಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಸಂಚಾಲಕರಾದ ರವಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ವೆಂಕಟರಮಣಪ್ಪ, ತಾಲೂಕು ಉಪಾಧ್ಯಕ್ಷರಾದ ರಾಮಕೃಷ್ಣ, ಹೋಬಳಿ ಅಧ್ಯಕ್ಷ ನರಸಿಂಹಮೂರ್ತಿ, ರಾಜ್ಯ ಕಾರ್ಯದರ್ಶಿ ಮುನಿರಾಜು ಇದ್ದರು.
Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

19 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

20 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

21 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

22 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago