ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ – ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ. ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.
ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು. ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು. ಆಗ ಅಪರಾಧ ಕೃತ್ಯಗಳನ್ನು ನಡೆಯುವ ಮೊದಲು ತಡೆಯಲು ಸಾಧ್ಯ ಎಂದರು.
*ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…