ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ – ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ. ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.
ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು. ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು. ಆಗ ಅಪರಾಧ ಕೃತ್ಯಗಳನ್ನು ನಡೆಯುವ ಮೊದಲು ತಡೆಯಲು ಸಾಧ್ಯ ಎಂದರು.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…