ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ – ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ. ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.
ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು. ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು. ಆಗ ಅಪರಾಧ ಕೃತ್ಯಗಳನ್ನು ನಡೆಯುವ ಮೊದಲು ತಡೆಯಲು ಸಾಧ್ಯ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…