ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್ ಸಮಾಜ ಪಕ್ಷವನ್ನು ಹುಟ್ಟುಹಾಕಿದ್ದರು. ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಕಾನ್ಸಿರಾಮ್ ಅವರು ಎಂದಿಗೂ ತತ್ವಗಳಲ್ಲಿ ರಾಜಿ ಮಾಡಿಕೊಳ್ಳಲಿಲ್ಲ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿಗುಂದ ಪಿ. ವೆಂಕಟೇಶ್ ಹೇಳಿದರು.
ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಬಹುಜನ ನಾಯಕ ಮಾನ್ಯವರ್ ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಹುಜನರು ರಾಜಕೀಯ ಅಧಿಕಾರ ಪಡೆಯಬೇಕೆಂಬ ಹೆಬ್ಬಯಕೆಯಿಂದ ಕಾನ್ಸಿರಾಮ್ ಅವರು ಬಿಎಸ್ಪಿ ಪಕ್ಷ ಆರಂಭಿಸಿದರು. ಬಹುಜನರ ಏಳಿಗೆಗಾಗಿ ಅವರ ಕೊಡುಗೆ ಅಪಾರ ಎಂದರು.
ಕೇಂದ್ರಸರ್ಕಾರದ ನೂತನ ನೀತಿಗಳಿಂದ ಖಾಸಗೀರಣಗೊಳ್ಳುತ್ತಿರುವ ಸರ್ಕಾರಿ ಸಂಸ್ಥೆಗಳ ಉದ್ಯೋಗಗಳಲ್ಲಿ ಮೀಸಲಾತಿ ಜಾರಿಯಾಗಬೇಕು. ಇದರಿಂದ ದಲಿತ ಮತ್ತು ಹಿಂದುಳಿದ ವರ್ಗದ ಜನತೆಗೆ ದೇಶಾದ್ಯಂತ ಅನುಕೂಲವಾಗಲಿದೆ ಎಂದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಲ್ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ರಾಜಕಾರಣ ಕೇವಲ ಅಧಿಕಾರಕ್ಕಾಗಿ ಮಾತ್ರವಲ್ಲದೆ, ದೇಶದಲ್ಲಿ ಭ್ರಷ್ಟಾಚಾರ, ಅಧಿಕಾರ ವಹಿಸಿಕೊಂಡವರ ದಬ್ಬಾಳಿಕೆ ತೊಲಗಿಸಬೇಕು. ಕಾನ್ಶಿರಾಮ್ ಅವರು ಇದೇ ದೃಷ್ಟಿಯಿಂದ ಪಕ್ಷವನ್ನು ಬಲಪಡಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಮತದಾರರಿಗೆ ಹಣ, ಮದ್ಯ ಹಂಚಿಕೆ ಮಾಡಿ ರಾಷ್ಟ್ರೀಯ ಪಕ್ಷಗಳು ಜನರನ್ನು ದಾರಿ ತಪ್ಪಿಸುತ್ತಿವೆ. ಸಾಮಾಜಿಕ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಸಾರ್ವಜನಿಕ ಸರಕಾರಿ ಕಚೇರಿಗಳಲ್ಲಿ ಬಡವರ, ಮದ್ಯಮ ವರ್ಗದವರ ಕೆಲಸಗಳು ಆಗುತ್ತಿಲ್ಲ. ಉಳ್ಳವರಿಗೆ ಮಾತ್ರ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಾರೆ ಎಂದು ಆರೋಪಿಸಿದರು.
ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮುನಿಕೃಷ್ಣಪ್ಪ, ರಾಜ್ಯ ಕಾರ್ಯದರ್ಶಿ ನಾಗರಾಜು, ಬಸವರಾಜು, ಜಿಲ್ಲಾಧ್ಯಕ್ಷ ಮಹದೇವ, ತಾಲೂಕು ಅಧ್ಯಕ್ಷ ನಂಜೇಶ್, ಜಿಲ್ಲಾ ಖಜಾಂಚಿ ಹೇಮಾ ಚಕ್ರಪಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…