ಕಾಮಗಾರಿಗಳಿಗೆ ಹಣ ಬಿಡುಗಡೆ ವಿಳಂಬ: ಸಾಲದ‌ ಸುಳಿಯಲ್ಲಿ ಗುತ್ತಿಗೆದಾರರು- ಗುತ್ತಿಗೆದಾರ ಸಂಘದ ತಾಲೂಕು ಅಧ್ಯಕ್ಷ ಜಿ.ಲಕ್ಷ್ಮೀಪತಿ

ಕಾಮಗಾರಿಗಳು ಸಂಪೂರ್ಣವಾಗಿ ಮುಕ್ತಾಯವಾದ ಕೂಡಲೇ ಕಾಮಗಾರಿ ಗುಣಮಟ್ಟ ಕುರಿತಂತೆ 3ನೇ ವ್ಯಕ್ತಿ ತಪಾಸಣೆ ನಂತರ ತಾಲ್ಲೂಕು ಹಂತದಲ್ಲೇ ಬಿಲ್ ಪಾವತಿಗಳು ನಡೆಯುತ್ತಿದ್ದವು. ಆದರೆ ಈಗ ಕಾಮಗಾರಿ ನಡೆದು ಎಲ್ಲಾ ರೀತಿಯ ಪರಿಶೀಲನೆಗಳು ಮುಕ್ತಾಯವಾದರೂ ಇಲಾಖೆಯ ಹಿರಿಯ ಅಧಿಕಾರಿಗಳ ಸಹಿಗೆ ಹಾಗೂ ಬಿಲ್ ಬಿಡುಗಡೆ ಮಾಡಿಸಿಕೊಳ್ಳಲು ತಿಂಗಳುಗಟ್ಟಲೆ ಕಾದು ಕುಳಿತುಕೊಳ್ಳುವಂತಾಗಿದೆ. ಈ ವಿಳಂಬ ನೀತಿಯಿಂದ ಗುತ್ತಿಗೆದಾರರು ಸಾಲಗಾರರಾಗುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಿವಿಲ್ ಗುತ್ತಿಗೆದಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ತಾಲ್ಲೂಕು ಹಂತದ ಅಧಿಕಾರಿಗಳು ಕಚೇರಿಗಳಲ್ಲಿ ಇರುವುದೇ ಅಪರೂಪವಾಗುತ್ತಿದೆ. ಇದು ಸಹ ಬಿಲ್ ಪಾವತಿ, ಕಾಮಗಾರಿಗಳ ಪರಿಶೀಲನೆಗೆ ದೊಡ್ಡ ಅಡ್ಡಿಯಾಗಿದೆ ಎಂದು ದೂರಿದರು.

ಜಲ ಜೀವನ್ ಮೀಷನ್ ಯೋಜನೆಯಲ್ಲಿ ಜಿಲ್ಲೆಗೆ ರೂ.40 ಕೋಟಿ ಬಿಡುಗಡೆಯಾಗಿದ್ದರು ಸಹ ಗುತ್ತಿಗೆದಾರರು ಹಣ ಪಡೆಯಲು ವಿವಿಧ ಹಂತಗಳ ಅಧಿಕಾರಿಗಳ ಸಹಿಗೆ ಕಾದು ಕುಳಿತುಕೊಳ್ಳುವಂತಾಗಿದೆ. ಬಿಲ್ ಪಾವತಿಗೆ ಇರುವ ಹಂತಗಳನ್ನು ಕಡಿಮೆಗೊಳೀಸಬೇಕು ಎಂದು ಹೇಳಿದರು.

ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡುವ ಸಂದರ್ಭದಲ್ಲೇ ಜಿಎಸ್ ಟಿ ಸೇರಿದಂತೆ ಎಲ್ಲಾ ರೀತಿಯ ತೆರಿಗೆಗಳನ್ನು ಕಡಿತಮಾಡಿಕೊಂಡ ನಂತರವೇ ಆನ್ ಲೈನ್ ಮೂಲಕ ಕಾಮಗಾರಿಯ ಹಣ ಪಾವತಿಯಾಗುತ್ತಿದೆ ಎಂದು ತಿಳಿಸಿದರು.

2017 ರಿಂದ ಇಲ್ಲಿಯವರೆಗೆ ಕಡಿತ ಮಾಡಿಕೊಂಡಿರುವ ಲಕ್ಷಾಂತರ ರೂಪಾಯಿ ಜಿಎಸ್ ಟಿ ಹಣ ಗುತ್ತಿಗೆದಾರರಿಗೆ ಮರುಪಾವತಿಯಾಗಿಲ್ಲ. ಈ ಬಗ್ಗೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸುತ್ತಲೇ ಬರಲಾಗುತ್ತಿದೆ. ಇತ್ತೀಚೆಗೆ ವಾಣಿಜ್ಯ ತೆರಿಗೆ, ಜಿಎಸ್ ಟಿ ಇಲಾಖೆಗಳಿಂದ ಗುತ್ತಿಗೆದಾರರಿಗೆ ವಿನಾಕಾರಣ ನೋಟಿಸ್ ಗಳನ್ನು ನೀಡುವ ಮೂಲಕ ಇಲ್ಲಸಲ್ಲದ ಮಾಹಿತಿಗಳನ್ನು ಕೇಳುತ್ತ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಮೂಲದಲ್ಲೇ ತೆರಿಗೆ ಕಡಿತ ಮಾಡಿಕೊಂಡ ನಂತರವೂ ಸಹ ನೋಟಿಸ್ಗಳನ್ನು ನೀಡುವ ಕೆಟ್ಟ ಪದ್ಧತಿ ನಿಲ್ಲಬೇಕಿದೆ ಎಂದು ಆಗ್ರಹಿಸಿದರು.

ಟೆಂಡರ್ ಪ್ರಕ್ರಿಯೆ ನಂತರ ಗುತ್ತಿಗೆದಾರರು ಕಾರ್ಯಾದೇಶ ಪಡೆದು ಕಾಮಗಾರಿ ಪ್ರಾರಂಭಿಸಲು ಗುದ್ದಲಿ ಪೂಜೆಗೆ ತಿಂಗಳು ಗಟ್ಟಲೆ ಕಾಯುವಂತಹ ಪರಿಸ್ಥಿತಿ ಉಂಟಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಸಮಯ ನೀಡುವವರೆಗೂ ಕಾದುಕುಳಿತುಕೊಳ್ಳುವಂತಾಗಿದೆ. ಇದರಿಂದಾಗಿ ನಿಗದಿತ ಸಮಯಕ್ಕೆ ಕಾಮಗಾರಿಗಳನ್ನು ಮಾಡಿಮುಗಿಸುವುದು ಕಷ್ಟವಾಗಿದೆ. ಕಾರ್ಯಾದೇಶ ನೀಡುತ್ತಿದ್ದಂತೆ ಕೆಲಸ ಪ್ರಾರಂಭಿಸಿದರೆ ಆರ್ಥಿಕ ವರ್ಷ ಕೊನೆಗೊಳ್ಳುವ ಮುನ್ನ ಕೆಲಸ ಮಾಡಲು ಅನುಕೂಲವಾಗಲಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯಿತ್ ರಾಜ್ ಇಲಾಖೆ ವತಿಯಿಂದ 15ನೇ ಹಣಕಾಸು ಯೋಜನೆಯಲ್ಲಿ ಕಾರ್ಯಾದೇಶ ಪಡೆದು ಕಾಮಗಾರಿಗಳನ್ನು ಮಾಡಿ ಮುಗಿಸಲಾಗಿದೆ. ಆದರೆ ಸರ್ಕಾರ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಚುನಾಯಿತ ಜನಪ್ರತಿನಿಧಿಗಳು ಇಲ್ಲದ ಕಾರಣ ನೀಡಿ ಹಣ ಹಿಂದಕ್ಕೆ ಪಡೆದಿದೆ. ಸರ್ಕಾರವೇ ಕಾರ್ಯಾದೇಶ ನೀಡಿದ ನಂತರ ಈಗ ಹಣ ನೀಡದೆ ಹಿಂದಕ್ಕೆ ಪಡೆದಿರುವುದು ಸರಿಯಲ್ಲ. ತಕ್ಷಣ 15ನೇ ಹಣಕಾಸು ಅಥವಾ ಬೇರಾವುದೇ ನಿಧಿಯಲ್ಲಿ ಕಾಮಗಾರಿ ಮುಕ್ತಾಯಗೊಳಿಸಿರುವ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗುತ್ತಿಗೆದಾರರ ಸಂಘದ ತಾಲ್ಲೂಕು ಉಪಾಧ್ಯಕ್ಷ ಕೆ.ಬಿ.ಬಚ್ಚೇಗೌಡ, ಕಾರ್ಯದರ್ಶಿ ಲಕ್ಷ್ಮೀಕಾಂತ, ಖಜಾಂಚಿ ಎ.ಚಂದ್ರಣ್ಣ, ದೇವನಹಳ್ಳಿ ಘಟಕದ ಅಧ್ಯಕ್ಷ ಸುಬ್ರಹ್ಮಣಿ, ನೆಲಮಂಗಲ ಅಧ್ಯಕ್ಷ ಪವನ್ಕುಮಾರ್, ಹೊಸಕೋಟೆ ಅಧ್ಯಕ್ಷ ಕೇಶವಮೂರ್ತಿ, ಗುತ್ತಿಗೆದಾರರಾದ ಆರೂಢಿ ಹರೀಶ್, ನಾರನಹಳ್ಳಿ ಕೆಂಪೇಗೌಡ ಮತ್ತಿತರರಿದ್ದರು

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

4 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

15 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

23 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago