ಕಾಮಗಾರಿಗಳಿಗೆ ಹಣ ಬಿಡುಗಡೆ ವಿಳಂಬ: ಸಾಲದ‌ ಸುಳಿಯಲ್ಲಿ ಗುತ್ತಿಗೆದಾರರು- ಗುತ್ತಿಗೆದಾರ ಸಂಘದ ತಾಲೂಕು ಅಧ್ಯಕ್ಷ ಜಿ.ಲಕ್ಷ್ಮೀಪತಿ

ಕಾಮಗಾರಿಗಳು ಸಂಪೂರ್ಣವಾಗಿ ಮುಕ್ತಾಯವಾದ ಕೂಡಲೇ ಕಾಮಗಾರಿ ಗುಣಮಟ್ಟ ಕುರಿತಂತೆ 3ನೇ ವ್ಯಕ್ತಿ ತಪಾಸಣೆ ನಂತರ ತಾಲ್ಲೂಕು ಹಂತದಲ್ಲೇ ಬಿಲ್ ಪಾವತಿಗಳು ನಡೆಯುತ್ತಿದ್ದವು. ಆದರೆ ಈಗ ಕಾಮಗಾರಿ ನಡೆದು ಎಲ್ಲಾ ರೀತಿಯ ಪರಿಶೀಲನೆಗಳು ಮುಕ್ತಾಯವಾದರೂ ಇಲಾಖೆಯ ಹಿರಿಯ ಅಧಿಕಾರಿಗಳ ಸಹಿಗೆ ಹಾಗೂ ಬಿಲ್ ಬಿಡುಗಡೆ ಮಾಡಿಸಿಕೊಳ್ಳಲು ತಿಂಗಳುಗಟ್ಟಲೆ ಕಾದು ಕುಳಿತುಕೊಳ್ಳುವಂತಾಗಿದೆ. ಈ ವಿಳಂಬ ನೀತಿಯಿಂದ ಗುತ್ತಿಗೆದಾರರು ಸಾಲಗಾರರಾಗುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಿವಿಲ್ ಗುತ್ತಿಗೆದಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ತಾಲ್ಲೂಕು ಹಂತದ ಅಧಿಕಾರಿಗಳು ಕಚೇರಿಗಳಲ್ಲಿ ಇರುವುದೇ ಅಪರೂಪವಾಗುತ್ತಿದೆ. ಇದು ಸಹ ಬಿಲ್ ಪಾವತಿ, ಕಾಮಗಾರಿಗಳ ಪರಿಶೀಲನೆಗೆ ದೊಡ್ಡ ಅಡ್ಡಿಯಾಗಿದೆ ಎಂದು ದೂರಿದರು.

ಜಲ ಜೀವನ್ ಮೀಷನ್ ಯೋಜನೆಯಲ್ಲಿ ಜಿಲ್ಲೆಗೆ ರೂ.40 ಕೋಟಿ ಬಿಡುಗಡೆಯಾಗಿದ್ದರು ಸಹ ಗುತ್ತಿಗೆದಾರರು ಹಣ ಪಡೆಯಲು ವಿವಿಧ ಹಂತಗಳ ಅಧಿಕಾರಿಗಳ ಸಹಿಗೆ ಕಾದು ಕುಳಿತುಕೊಳ್ಳುವಂತಾಗಿದೆ. ಬಿಲ್ ಪಾವತಿಗೆ ಇರುವ ಹಂತಗಳನ್ನು ಕಡಿಮೆಗೊಳೀಸಬೇಕು ಎಂದು ಹೇಳಿದರು.

ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡುವ ಸಂದರ್ಭದಲ್ಲೇ ಜಿಎಸ್ ಟಿ ಸೇರಿದಂತೆ ಎಲ್ಲಾ ರೀತಿಯ ತೆರಿಗೆಗಳನ್ನು ಕಡಿತಮಾಡಿಕೊಂಡ ನಂತರವೇ ಆನ್ ಲೈನ್ ಮೂಲಕ ಕಾಮಗಾರಿಯ ಹಣ ಪಾವತಿಯಾಗುತ್ತಿದೆ ಎಂದು ತಿಳಿಸಿದರು.

2017 ರಿಂದ ಇಲ್ಲಿಯವರೆಗೆ ಕಡಿತ ಮಾಡಿಕೊಂಡಿರುವ ಲಕ್ಷಾಂತರ ರೂಪಾಯಿ ಜಿಎಸ್ ಟಿ ಹಣ ಗುತ್ತಿಗೆದಾರರಿಗೆ ಮರುಪಾವತಿಯಾಗಿಲ್ಲ. ಈ ಬಗ್ಗೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸುತ್ತಲೇ ಬರಲಾಗುತ್ತಿದೆ. ಇತ್ತೀಚೆಗೆ ವಾಣಿಜ್ಯ ತೆರಿಗೆ, ಜಿಎಸ್ ಟಿ ಇಲಾಖೆಗಳಿಂದ ಗುತ್ತಿಗೆದಾರರಿಗೆ ವಿನಾಕಾರಣ ನೋಟಿಸ್ ಗಳನ್ನು ನೀಡುವ ಮೂಲಕ ಇಲ್ಲಸಲ್ಲದ ಮಾಹಿತಿಗಳನ್ನು ಕೇಳುತ್ತ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಮೂಲದಲ್ಲೇ ತೆರಿಗೆ ಕಡಿತ ಮಾಡಿಕೊಂಡ ನಂತರವೂ ಸಹ ನೋಟಿಸ್ಗಳನ್ನು ನೀಡುವ ಕೆಟ್ಟ ಪದ್ಧತಿ ನಿಲ್ಲಬೇಕಿದೆ ಎಂದು ಆಗ್ರಹಿಸಿದರು.

ಟೆಂಡರ್ ಪ್ರಕ್ರಿಯೆ ನಂತರ ಗುತ್ತಿಗೆದಾರರು ಕಾರ್ಯಾದೇಶ ಪಡೆದು ಕಾಮಗಾರಿ ಪ್ರಾರಂಭಿಸಲು ಗುದ್ದಲಿ ಪೂಜೆಗೆ ತಿಂಗಳು ಗಟ್ಟಲೆ ಕಾಯುವಂತಹ ಪರಿಸ್ಥಿತಿ ಉಂಟಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಸಮಯ ನೀಡುವವರೆಗೂ ಕಾದುಕುಳಿತುಕೊಳ್ಳುವಂತಾಗಿದೆ. ಇದರಿಂದಾಗಿ ನಿಗದಿತ ಸಮಯಕ್ಕೆ ಕಾಮಗಾರಿಗಳನ್ನು ಮಾಡಿಮುಗಿಸುವುದು ಕಷ್ಟವಾಗಿದೆ. ಕಾರ್ಯಾದೇಶ ನೀಡುತ್ತಿದ್ದಂತೆ ಕೆಲಸ ಪ್ರಾರಂಭಿಸಿದರೆ ಆರ್ಥಿಕ ವರ್ಷ ಕೊನೆಗೊಳ್ಳುವ ಮುನ್ನ ಕೆಲಸ ಮಾಡಲು ಅನುಕೂಲವಾಗಲಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯಿತ್ ರಾಜ್ ಇಲಾಖೆ ವತಿಯಿಂದ 15ನೇ ಹಣಕಾಸು ಯೋಜನೆಯಲ್ಲಿ ಕಾರ್ಯಾದೇಶ ಪಡೆದು ಕಾಮಗಾರಿಗಳನ್ನು ಮಾಡಿ ಮುಗಿಸಲಾಗಿದೆ. ಆದರೆ ಸರ್ಕಾರ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಚುನಾಯಿತ ಜನಪ್ರತಿನಿಧಿಗಳು ಇಲ್ಲದ ಕಾರಣ ನೀಡಿ ಹಣ ಹಿಂದಕ್ಕೆ ಪಡೆದಿದೆ. ಸರ್ಕಾರವೇ ಕಾರ್ಯಾದೇಶ ನೀಡಿದ ನಂತರ ಈಗ ಹಣ ನೀಡದೆ ಹಿಂದಕ್ಕೆ ಪಡೆದಿರುವುದು ಸರಿಯಲ್ಲ. ತಕ್ಷಣ 15ನೇ ಹಣಕಾಸು ಅಥವಾ ಬೇರಾವುದೇ ನಿಧಿಯಲ್ಲಿ ಕಾಮಗಾರಿ ಮುಕ್ತಾಯಗೊಳಿಸಿರುವ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗುತ್ತಿಗೆದಾರರ ಸಂಘದ ತಾಲ್ಲೂಕು ಉಪಾಧ್ಯಕ್ಷ ಕೆ.ಬಿ.ಬಚ್ಚೇಗೌಡ, ಕಾರ್ಯದರ್ಶಿ ಲಕ್ಷ್ಮೀಕಾಂತ, ಖಜಾಂಚಿ ಎ.ಚಂದ್ರಣ್ಣ, ದೇವನಹಳ್ಳಿ ಘಟಕದ ಅಧ್ಯಕ್ಷ ಸುಬ್ರಹ್ಮಣಿ, ನೆಲಮಂಗಲ ಅಧ್ಯಕ್ಷ ಪವನ್ಕುಮಾರ್, ಹೊಸಕೋಟೆ ಅಧ್ಯಕ್ಷ ಕೇಶವಮೂರ್ತಿ, ಗುತ್ತಿಗೆದಾರರಾದ ಆರೂಢಿ ಹರೀಶ್, ನಾರನಹಳ್ಳಿ ಕೆಂಪೇಗೌಡ ಮತ್ತಿತರರಿದ್ದರು

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

5 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago