ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರಿಗೆ ನುಡಿನಮನ

ಭಾರತವಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಮ್ಯುನಿಷ್ಟ್  ಪಕ್ಷದ ಚಿಂತನೆಗಳನ್ನು ಮುನ್ನಡೆಸಿದವರು ಮತ್ತು ಮಾರ್ಗದರ್ಶಕರಾಗಿದ್ದವರು ಕಾಮ್ರೇಡ್ ಸೀತಾರಾಮ್ ಯಚೂರಿ ಅವರು. ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತ ಮೌಲ್ಯಗಳ ಪರವಾಗಿ ಸದಾ ಬದ್ದತೆ  ಹೊಂದಿದ್ದವರು ಎಂದು  ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ರೈತ, ಕಾರ್ಮಿಕರ (ಸಿಐಟಿಯು) ಕಚೇರಿಯ ಆವರಣದಲ್ಲಿ ನಡೆದ. ಕಾಮ್ರೇಡ್ ಸೀತಾರಾಮ್ ಯಚೂರಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ‌ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿವೆ. ಈ ಬಗ್ಗೆ ಗಂಭೀರವಾಗಿ ಸದನಗಳಲ್ಲಿ  ಮಾತನಾಡುವ ಧೈರ್ಯ ರಾಜಕೀಯ ಮುಖಂಡರಿಗೆ ಇಲ್ಲವಾಗಿದೆ. ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಸೀತಾರಾಮ್ ಯಚೂರಿ ಅವರ ಸಾವು ಜನಚಳವಳಿಗೆ ಆದ ನಷ್ಟವಾಗಿದೆ ಎಂದರು.

ಹತ್ತು ವರ್ಷಗಳ ಕಾಲ ಸಂಸದರಾಗಿದ್ದ ಕಾಮ್ರೇಡ್ ಸೀತಾರಾಮ್ ಯಚೂರಿ ಅವರು ತಮ್ಮ ಪಕ್ಷದ ಹೊರಗೂ ಉತ್ತಮ ಸ್ನೇಹಸಂಬಂಧ ಹೊಂದಿದ್ದರು. ಯಚೂರಿಯವರ ಬೌದ್ದಿಕ ಚಿಂತನೆ, ಸಂವಾದ, ನಿರೂಪಣೆ ಶೈಲಿಯಿಂದ ಎಡ ವಿಚಾರಧಾರೆಗಳು ಜನಪ್ರಿಯಗೊಳ್ಳಲು ಸಹಕಾರಿಯಾಯಿತು. ದುಡಿಯುವ ವರ್ಗದ ನೇತಾರರಾಗಿದ್ದ ಅವರ ಜನಪರ ಕಾಳಜಿ, ಸಂವಿಧಾನ ಆಶಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕುರಿತು ಮಾತನಾಡುತ್ತಿದ್ದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಸಿಪಿಐ(ಎಂ) ಪಕ್ಷದ ಕಾರ್ಯದರ್ಶಿ ಎಸ್.ರುದ್ರಾರಾಧ್ಯ ಮಾತನಾಡಿ, ಮಾರ್ಕ್ ವಾದಿ ತತ್ತ್ವದ ಗಾರುಡಿಗರೆಂಬ ಕರೆಯಲ್ಪಟ್ಟ ಕಾಂಮ್ರೇಡ್ ಸೀತಾರಾಮ್ ಯಚೂರಿ ಅವರು‌ ಶೋಷಿತ ಸಮುದಾಯವನ್ನು ಮೇಲೆತ್ತುವುದು ಮುಖ್ಯ ಉದ್ದೇಶವೆಂದು ತಿಳಿದಿದ್ದರು. ಕೋಮುವಾದ ಮತ್ತು ಮೂಲಭೂತವಾದಿಗಳ ವಿರುದ್ಧ ಜನರನ್ನು ಎಚ್ಚಿಸುವುದರಲ್ಲಿ‌ ಸದಾ ನಿರಂತರಾಗಿದ್ದರು. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೋಮುವಾದಿ ಪಕ್ಷಗಳ ವಿರುದ್ದ ಅನ್ಯ ಪಕ್ಷಗಳನ್ನು ಒಗ್ಗೂಡಿಸಿದರು. ವಿದ್ಯಾರ್ಥಿ ಚಳವಳಿಯ ಇತಿಹಾಸವನ್ನು ಭಾರತದಲ್ಲಿ ಚರ್ಚಿಸಿದಾಗಲೆಲ್ಲಾ ಕಾಮ್ರೇಡ್ ಸೀತಾರಾಮ್ ಯೆಚೂರಿಯವರ ಕೊಡುಗೆಯನ್ನು ಯಾರು ಮರೆಯುವುದಿಲ್ಲ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಪ್ರಭಾ ಬೆಳವಂಗಲ ಮಾತನಾಡಿ, ಇಂಡಿಯಾ ಒಕ್ಕೂಟವನ್ನು ರಚನೆ ಮಾಡುವಲ್ಲಿ ಮಹತ್ವದ ಪಾತ್ರವನ್ನು ಕಾಮ್ರೇಡ್ ಸೀತಾರಾಮ್ ಯಚೂರಿ ವಹಿಸಿದ್ದರು. ಜನಪರವಾಗಿ ಯೋಚಿಸುವ ರಾಜಕಾರಣಿಯಾಗಿ ದಶಕಗಳ ಕಾಲ ವಿದ್ಯಾರ್ಥಿಗಳನ್ನು ಪ್ರಭಾವಿಸಿದ್ದರು. ವಿದ್ಯಾರ್ಥಿಗಳು ಮತ್ತು ಯುವಜನತೆ ಕೋಮುವಾದಕ್ಕೆ ಬಲಿಯಾಗುವುದನ್ನು ತಡೆಯುವುದು ಯಚೂರಿ ಅವರ ತತ್ತ್ವ ಮತ್ತು ಸಿದ್ದಾಂತಗಳಿಗೆ ನಾವು ನೀಡುವ ಮನ್ನಣೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡ ಹೊನ್ನಾಘಟ್ಟ ಮಹೇಶ್, ಕನ್ನಡ ಪಕ್ಷದ ಮುಖಂಡರುಗಳಾದ ಸಂಜೀವನಾಯಕ್, ಡಿ.ಪಿ.ಆಂಜನೇಯ, ಮುನಿಪಾಪಣ್ಣ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಉಪನ್ಯಾಸಕ ಸತೀಶ್, ಕರ್ನಾಟಕ ಪ್ರಾಂತ ರೈತ ಸಂಘದ ರಾಮಕೃಷ್ಣಯ್ಯ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್, ತಾಲ್ಲೂಕು ಸಮಿತಿ ಸದಸ್ಯ ರೇಣುಕಾರಾಧ್ಯ, ಬಿ.ಆರ್.ರಮೇಶ್, ವಕೀಲ ಸಂಜೀವ್ಪ, ದಲಿತ ಸಂಘಟನೆ ಮುಖಂಡರಾದ ರಾಜುಸಣ್ಣಕ್ಕಿ, ಗೂಳ್ಯ ಹನುಮಣ್ಣ, ಡಿವೈಎಫ್ಐ ಸಂಘಟನೆಯ ನಟರಾಜು, ರಘು ಮುಂತಾದವರು ಭಾಗವಹಿದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

4 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

4 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

6 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

17 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

20 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

22 hours ago