ಭಾರತವಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಮ್ಯುನಿಷ್ಟ್ ಪಕ್ಷದ ಚಿಂತನೆಗಳನ್ನು ಮುನ್ನಡೆಸಿದವರು ಮತ್ತು ಮಾರ್ಗದರ್ಶಕರಾಗಿದ್ದವರು ಕಾಮ್ರೇಡ್ ಸೀತಾರಾಮ್ ಯಚೂರಿ ಅವರು. ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತ ಮೌಲ್ಯಗಳ ಪರವಾಗಿ ಸದಾ ಬದ್ದತೆ ಹೊಂದಿದ್ದವರು ಎಂದು ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ರೈತ, ಕಾರ್ಮಿಕರ (ಸಿಐಟಿಯು) ಕಚೇರಿಯ ಆವರಣದಲ್ಲಿ ನಡೆದ. ಕಾಮ್ರೇಡ್ ಸೀತಾರಾಮ್ ಯಚೂರಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿವೆ. ಈ ಬಗ್ಗೆ ಗಂಭೀರವಾಗಿ ಸದನಗಳಲ್ಲಿ ಮಾತನಾಡುವ ಧೈರ್ಯ ರಾಜಕೀಯ ಮುಖಂಡರಿಗೆ ಇಲ್ಲವಾಗಿದೆ. ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಸೀತಾರಾಮ್ ಯಚೂರಿ ಅವರ ಸಾವು ಜನಚಳವಳಿಗೆ ಆದ ನಷ್ಟವಾಗಿದೆ ಎಂದರು.
ಹತ್ತು ವರ್ಷಗಳ ಕಾಲ ಸಂಸದರಾಗಿದ್ದ ಕಾಮ್ರೇಡ್ ಸೀತಾರಾಮ್ ಯಚೂರಿ ಅವರು ತಮ್ಮ ಪಕ್ಷದ ಹೊರಗೂ ಉತ್ತಮ ಸ್ನೇಹಸಂಬಂಧ ಹೊಂದಿದ್ದರು. ಯಚೂರಿಯವರ ಬೌದ್ದಿಕ ಚಿಂತನೆ, ಸಂವಾದ, ನಿರೂಪಣೆ ಶೈಲಿಯಿಂದ ಎಡ ವಿಚಾರಧಾರೆಗಳು ಜನಪ್ರಿಯಗೊಳ್ಳಲು ಸಹಕಾರಿಯಾಯಿತು. ದುಡಿಯುವ ವರ್ಗದ ನೇತಾರರಾಗಿದ್ದ ಅವರ ಜನಪರ ಕಾಳಜಿ, ಸಂವಿಧಾನ ಆಶಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕುರಿತು ಮಾತನಾಡುತ್ತಿದ್ದರು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಸಿಪಿಐ(ಎಂ) ಪಕ್ಷದ ಕಾರ್ಯದರ್ಶಿ ಎಸ್.ರುದ್ರಾರಾಧ್ಯ ಮಾತನಾಡಿ, ಮಾರ್ಕ್ ವಾದಿ ತತ್ತ್ವದ ಗಾರುಡಿಗರೆಂಬ ಕರೆಯಲ್ಪಟ್ಟ ಕಾಂಮ್ರೇಡ್ ಸೀತಾರಾಮ್ ಯಚೂರಿ ಅವರು ಶೋಷಿತ ಸಮುದಾಯವನ್ನು ಮೇಲೆತ್ತುವುದು ಮುಖ್ಯ ಉದ್ದೇಶವೆಂದು ತಿಳಿದಿದ್ದರು. ಕೋಮುವಾದ ಮತ್ತು ಮೂಲಭೂತವಾದಿಗಳ ವಿರುದ್ಧ ಜನರನ್ನು ಎಚ್ಚಿಸುವುದರಲ್ಲಿ ಸದಾ ನಿರಂತರಾಗಿದ್ದರು. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೋಮುವಾದಿ ಪಕ್ಷಗಳ ವಿರುದ್ದ ಅನ್ಯ ಪಕ್ಷಗಳನ್ನು ಒಗ್ಗೂಡಿಸಿದರು. ವಿದ್ಯಾರ್ಥಿ ಚಳವಳಿಯ ಇತಿಹಾಸವನ್ನು ಭಾರತದಲ್ಲಿ ಚರ್ಚಿಸಿದಾಗಲೆಲ್ಲಾ ಕಾಮ್ರೇಡ್ ಸೀತಾರಾಮ್ ಯೆಚೂರಿಯವರ ಕೊಡುಗೆಯನ್ನು ಯಾರು ಮರೆಯುವುದಿಲ್ಲ ಎಂದರು.
ಕರ್ನಾಟಕ ಪ್ರಾಂತ ರೈತ ಸಂಘದ ಪ್ರಭಾ ಬೆಳವಂಗಲ ಮಾತನಾಡಿ, ಇಂಡಿಯಾ ಒಕ್ಕೂಟವನ್ನು ರಚನೆ ಮಾಡುವಲ್ಲಿ ಮಹತ್ವದ ಪಾತ್ರವನ್ನು ಕಾಮ್ರೇಡ್ ಸೀತಾರಾಮ್ ಯಚೂರಿ ವಹಿಸಿದ್ದರು. ಜನಪರವಾಗಿ ಯೋಚಿಸುವ ರಾಜಕಾರಣಿಯಾಗಿ ದಶಕಗಳ ಕಾಲ ವಿದ್ಯಾರ್ಥಿಗಳನ್ನು ಪ್ರಭಾವಿಸಿದ್ದರು. ವಿದ್ಯಾರ್ಥಿಗಳು ಮತ್ತು ಯುವಜನತೆ ಕೋಮುವಾದಕ್ಕೆ ಬಲಿಯಾಗುವುದನ್ನು ತಡೆಯುವುದು ಯಚೂರಿ ಅವರ ತತ್ತ್ವ ಮತ್ತು ಸಿದ್ದಾಂತಗಳಿಗೆ ನಾವು ನೀಡುವ ಮನ್ನಣೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡ ಹೊನ್ನಾಘಟ್ಟ ಮಹೇಶ್, ಕನ್ನಡ ಪಕ್ಷದ ಮುಖಂಡರುಗಳಾದ ಸಂಜೀವನಾಯಕ್, ಡಿ.ಪಿ.ಆಂಜನೇಯ, ಮುನಿಪಾಪಣ್ಣ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಉಪನ್ಯಾಸಕ ಸತೀಶ್, ಕರ್ನಾಟಕ ಪ್ರಾಂತ ರೈತ ಸಂಘದ ರಾಮಕೃಷ್ಣಯ್ಯ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್, ತಾಲ್ಲೂಕು ಸಮಿತಿ ಸದಸ್ಯ ರೇಣುಕಾರಾಧ್ಯ, ಬಿ.ಆರ್.ರಮೇಶ್, ವಕೀಲ ಸಂಜೀವ್ಪ, ದಲಿತ ಸಂಘಟನೆ ಮುಖಂಡರಾದ ರಾಜುಸಣ್ಣಕ್ಕಿ, ಗೂಳ್ಯ ಹನುಮಣ್ಣ, ಡಿವೈಎಫ್ಐ ಸಂಘಟನೆಯ ನಟರಾಜು, ರಘು ಮುಂತಾದವರು ಭಾಗವಹಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…