ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರಿಗೆ ನುಡಿನಮನ

ಭಾರತವಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಮ್ಯುನಿಷ್ಟ್  ಪಕ್ಷದ ಚಿಂತನೆಗಳನ್ನು ಮುನ್ನಡೆಸಿದವರು ಮತ್ತು ಮಾರ್ಗದರ್ಶಕರಾಗಿದ್ದವರು ಕಾಮ್ರೇಡ್ ಸೀತಾರಾಮ್ ಯಚೂರಿ ಅವರು. ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತ ಮೌಲ್ಯಗಳ ಪರವಾಗಿ ಸದಾ ಬದ್ದತೆ  ಹೊಂದಿದ್ದವರು ಎಂದು  ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ರೈತ, ಕಾರ್ಮಿಕರ (ಸಿಐಟಿಯು) ಕಚೇರಿಯ ಆವರಣದಲ್ಲಿ ನಡೆದ. ಕಾಮ್ರೇಡ್ ಸೀತಾರಾಮ್ ಯಚೂರಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ‌ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿವೆ. ಈ ಬಗ್ಗೆ ಗಂಭೀರವಾಗಿ ಸದನಗಳಲ್ಲಿ  ಮಾತನಾಡುವ ಧೈರ್ಯ ರಾಜಕೀಯ ಮುಖಂಡರಿಗೆ ಇಲ್ಲವಾಗಿದೆ. ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಸೀತಾರಾಮ್ ಯಚೂರಿ ಅವರ ಸಾವು ಜನಚಳವಳಿಗೆ ಆದ ನಷ್ಟವಾಗಿದೆ ಎಂದರು.

ಹತ್ತು ವರ್ಷಗಳ ಕಾಲ ಸಂಸದರಾಗಿದ್ದ ಕಾಮ್ರೇಡ್ ಸೀತಾರಾಮ್ ಯಚೂರಿ ಅವರು ತಮ್ಮ ಪಕ್ಷದ ಹೊರಗೂ ಉತ್ತಮ ಸ್ನೇಹಸಂಬಂಧ ಹೊಂದಿದ್ದರು. ಯಚೂರಿಯವರ ಬೌದ್ದಿಕ ಚಿಂತನೆ, ಸಂವಾದ, ನಿರೂಪಣೆ ಶೈಲಿಯಿಂದ ಎಡ ವಿಚಾರಧಾರೆಗಳು ಜನಪ್ರಿಯಗೊಳ್ಳಲು ಸಹಕಾರಿಯಾಯಿತು. ದುಡಿಯುವ ವರ್ಗದ ನೇತಾರರಾಗಿದ್ದ ಅವರ ಜನಪರ ಕಾಳಜಿ, ಸಂವಿಧಾನ ಆಶಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕುರಿತು ಮಾತನಾಡುತ್ತಿದ್ದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಸಿಪಿಐ(ಎಂ) ಪಕ್ಷದ ಕಾರ್ಯದರ್ಶಿ ಎಸ್.ರುದ್ರಾರಾಧ್ಯ ಮಾತನಾಡಿ, ಮಾರ್ಕ್ ವಾದಿ ತತ್ತ್ವದ ಗಾರುಡಿಗರೆಂಬ ಕರೆಯಲ್ಪಟ್ಟ ಕಾಂಮ್ರೇಡ್ ಸೀತಾರಾಮ್ ಯಚೂರಿ ಅವರು‌ ಶೋಷಿತ ಸಮುದಾಯವನ್ನು ಮೇಲೆತ್ತುವುದು ಮುಖ್ಯ ಉದ್ದೇಶವೆಂದು ತಿಳಿದಿದ್ದರು. ಕೋಮುವಾದ ಮತ್ತು ಮೂಲಭೂತವಾದಿಗಳ ವಿರುದ್ಧ ಜನರನ್ನು ಎಚ್ಚಿಸುವುದರಲ್ಲಿ‌ ಸದಾ ನಿರಂತರಾಗಿದ್ದರು. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೋಮುವಾದಿ ಪಕ್ಷಗಳ ವಿರುದ್ದ ಅನ್ಯ ಪಕ್ಷಗಳನ್ನು ಒಗ್ಗೂಡಿಸಿದರು. ವಿದ್ಯಾರ್ಥಿ ಚಳವಳಿಯ ಇತಿಹಾಸವನ್ನು ಭಾರತದಲ್ಲಿ ಚರ್ಚಿಸಿದಾಗಲೆಲ್ಲಾ ಕಾಮ್ರೇಡ್ ಸೀತಾರಾಮ್ ಯೆಚೂರಿಯವರ ಕೊಡುಗೆಯನ್ನು ಯಾರು ಮರೆಯುವುದಿಲ್ಲ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಪ್ರಭಾ ಬೆಳವಂಗಲ ಮಾತನಾಡಿ, ಇಂಡಿಯಾ ಒಕ್ಕೂಟವನ್ನು ರಚನೆ ಮಾಡುವಲ್ಲಿ ಮಹತ್ವದ ಪಾತ್ರವನ್ನು ಕಾಮ್ರೇಡ್ ಸೀತಾರಾಮ್ ಯಚೂರಿ ವಹಿಸಿದ್ದರು. ಜನಪರವಾಗಿ ಯೋಚಿಸುವ ರಾಜಕಾರಣಿಯಾಗಿ ದಶಕಗಳ ಕಾಲ ವಿದ್ಯಾರ್ಥಿಗಳನ್ನು ಪ್ರಭಾವಿಸಿದ್ದರು. ವಿದ್ಯಾರ್ಥಿಗಳು ಮತ್ತು ಯುವಜನತೆ ಕೋಮುವಾದಕ್ಕೆ ಬಲಿಯಾಗುವುದನ್ನು ತಡೆಯುವುದು ಯಚೂರಿ ಅವರ ತತ್ತ್ವ ಮತ್ತು ಸಿದ್ದಾಂತಗಳಿಗೆ ನಾವು ನೀಡುವ ಮನ್ನಣೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡ ಹೊನ್ನಾಘಟ್ಟ ಮಹೇಶ್, ಕನ್ನಡ ಪಕ್ಷದ ಮುಖಂಡರುಗಳಾದ ಸಂಜೀವನಾಯಕ್, ಡಿ.ಪಿ.ಆಂಜನೇಯ, ಮುನಿಪಾಪಣ್ಣ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಉಪನ್ಯಾಸಕ ಸತೀಶ್, ಕರ್ನಾಟಕ ಪ್ರಾಂತ ರೈತ ಸಂಘದ ರಾಮಕೃಷ್ಣಯ್ಯ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್, ತಾಲ್ಲೂಕು ಸಮಿತಿ ಸದಸ್ಯ ರೇಣುಕಾರಾಧ್ಯ, ಬಿ.ಆರ್.ರಮೇಶ್, ವಕೀಲ ಸಂಜೀವ್ಪ, ದಲಿತ ಸಂಘಟನೆ ಮುಖಂಡರಾದ ರಾಜುಸಣ್ಣಕ್ಕಿ, ಗೂಳ್ಯ ಹನುಮಣ್ಣ, ಡಿವೈಎಫ್ಐ ಸಂಘಟನೆಯ ನಟರಾಜು, ರಘು ಮುಂತಾದವರು ಭಾಗವಹಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

22 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago