ಕೋಲಾರ: ನಗರವನ್ನು ನೈರ್ಮಲ್ಯದಿಂದ ಕಾಪಾಡಲು ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಅಗತ್ಯವಾಗಿದ್ದು ಅದಕ್ಕೆ ಬೇಕಾದ ಅನುದಾನವು ರಾಜ್ಯ ಸರಕಾರದಲ್ಲಿ ಕೊರತೆಯಿಲ್ಲ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.
ನಗರದ ಕಾರಂಜಿಕಟ್ಟೆಯ 7 ನೇ ಕ್ರಾಸ್ ನಲ್ಲಿ ಶುಕ್ರವಾರ ಸಂಜೆ ಸುಮಾರು 32 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಬಡವರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾ ಇದೆ. ಕೊಟ್ಟ ಅನುದಾನವನ್ನು ಸಹ ಸಮರ್ಪಕವಾಗಿ ಬಳಕೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಭಿವೃದ್ಧಿಗೆ ಸಾಕಷ್ಟು ಅನುದಾನವು ಹರಿದು ಬರುತ್ತಿರುವುದರಿಂದ ಬಹುತೇಕವಾಗಿ ನಗರದ ಖಾಲಿ ಇರುವ ಸಿಸಿ ರಸ್ತೆ ಇತರೆ ಕಾಮಗಾರಿಗಳು ನಡೆಯಲಿದ್ದು , ಕಾಮಗಾರಿಗಳು ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಲಕ್ಷ್ಮೀದೇವಮ್ಮ, ಗುಣಶೇಖರ್, ಮಂಜುನಾಥ್, ಮಾಜಿ ಸದಸ್ಯ ಚಂದ್ರಮೌಳಿ ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಆನಂದ್ ಕುಮಾರ್, ಮುನಿನಾರಾಯಣಪ್ಪ, ಶಾಂತಿನಗರ ಕೃಷ್ಣ, ಶ್ರೀನಾಥ್, ಕಿಲಾರಪೇಟೆ ಮಣಿ, ಸುಮನ್, ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…