ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಮನೆ ಮೇಲೆ ಇಡಿ ದಾಳಿ: ಕ್ಯೋಟ್ಯಂತರ ನಗದು, 6.75 ಕೆಜಿ ಚಿನ್ನ, ಬ್ಯಾಂಕ್ ಠೇವಣಿ ಪತ್ತೆ, ಜಪ್ತಿ

ಉತ್ತರ ಕನ್ನಡ, ಕಾರವಾರ: ಅಕ್ರಮ ಕಬ್ಬಿಣದ ಅದಿರು ರಫ್ತು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ಇಡಿ) ಕಾರವಾರ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಎರಡು ದಿನಗಳ ಕಾಲ ನಡೆದ ಈ ಶೋಧ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ಇಡಿ  ವಶಪಡಿಸಿಕೊಳ್ಳಲಾಗಿದೆ.

ಇಡಿ ಬೆಂಗಳೂರು ಘಟಕದ ಅಧಿಕಾರಿಗಳು ಆಗಸ್ಟ್ 13 ಮತ್ತು 14ರಂದು ಕರ್ನಾಟಕದ ಕಾರವಾರ ಶಾಸಕ ಸತೀಶ್ ಸೈಲ್ ಮನೆ ಮತ್ತು ಇನ್ನಿತರ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಿದ್ದರು.

ಈ ದಾಳಿಯ ಸಮಯದಲ್ಲಿ, ₹1.68 ಕೋಟಿ ನಗದು ಹಾಗೂ 6.75 ಕೆಜಿ ತೂಕದ ಚಿನ್ನಾಭರಣ ಮತ್ತು ಬಂಗಾರದ ಗಟ್ಟಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಸುಮಾರು ₹14.13 ಕೋಟಿ ರೂಪಾಯಿಗಳನ್ನು ಸ್ಥಗಿತಗೊಳಿಸಲಾಗಿದೆ (frozen) ಎಂದು ಇಡಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಈ ತನಿಖೆ ನಡೆಯುತ್ತಿದೆ. ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಸತೀಶ್ ಸೈಲ್ ಮತ್ತು ಇತರರ ವಿರುದ್ಧ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದ ತನಿಖೆ ಮುಂದುವರಿದಿದೆ. ಶೋಧದ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳು, ಇ-ಮೇಲ್‌ಗಳು ಮತ್ತು ಇತರ ಸಾಕ್ಷ್ಯಗಳನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

13 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago